ಹಪನಹಳ್ಳಿ: ದಾವಣಗೆರೆ ಸಮೀಪ ಬಳ್ಳಾರಿ ತಾಲ್ಲೂಕಿನ ದುಗ್ಗಾವತಿಯಲ್ಲಿರುವ ಮಾಜಿ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ ಅವರ ಒಡೆತನದ ಮದ್ಯ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ದುಗ್ಗಾವತಿ ಸಕ್ಕರೆ ಕಾರ್ಖಾನೆಯಲ್ಲಿ ಮದ್ಯ ತಯಾರಿಕ ಘಟಕವಾದ ಜಾನ್ ಡಿಸ್ಟಿಲರೀಸ್ ಗೆ ಸೇರಿದ ಕೇಂದ್ರದಲ್ಲಿ ಈ ಅವಘಡ ನಡೆದಿದೆ. ಬೆಳಿಗ್ಗೆ ಟ್ಯಾಂಕರ್ ವೈಲ್ಡಿಂಗ್ ಕಾರ್ಯದಲ್ಲಿ ತೊಡಗಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಒಳಗಡೆ ಅನೇಕ ಕಾರ್ಮಿಕರು ಕೆಲಸ ಮಾಡುತ್ತಿದ್ದರು.

ಆಲ್ಕೋಹಾಲ್ ತಯಾರಿಕಾ ಘಟಕವಾಗಿದ್ದರಿಂದ ಬೆಂಕಿ ಬೇಗನೇ ಇಡೀ ಘಟಕ್ಕೆ ವ್ಯಾಪಿಸಿತು. ಸಾಕಷ್ಟು ಪ್ರಮಾಣದ ಮದ್ಯದ ಬಾಟೆಲ್ಗಳನ್ನು ಗೋದಾಮಿನಲ್ಲಿ ದಾಸ್ತಾನು ಮಾಡಲಾಗಿದ್ದು, ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜು ಮಾಡಲಾಗಿದೆ.

ಸ್ಥಳಕ್ಕೆ ಹರಪನಹಳ್ಳಿ, ಹರಿಹರ ಮತ್ತು ದಾವಣಗೆರೆಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ತಹಶೀಲ್ದಾರ್ ಎಲ್.ಎಂ.ನಂದೀಶ್ ಭೇಟಿ ನೀಡಿ ಪರಿಶೀಲಿಸಿದರು. ಹಲುವಾಗಲು ಪೊಲೀಸ್ ಠಾಣೆ ಪೊಲೀಸರು ಸ್ಥಳದಲ್ಲಿದ್ದಾರೆ.



