Connect with us

Dvgsuddi Kannada | online news portal | Kannada news online

ದಾವಣಗೆರೆ: ತಾ.ಪಂ, ಜಿ.ಪಂ ಚುನಾವಣಾ ಕ್ಷೇತ್ರದ ಮರು ವಿಂಗಡಣೆ : ಆಕ್ಷೇಪಣೆ ಸಲ್ಲಿಸಲು 15 ದಿನ ಅವಕಾಶ

davangerer bord

ದಾವಣಗೆರೆ

ದಾವಣಗೆರೆ: ತಾ.ಪಂ, ಜಿ.ಪಂ ಚುನಾವಣಾ ಕ್ಷೇತ್ರದ ಮರು ವಿಂಗಡಣೆ : ಆಕ್ಷೇಪಣೆ ಸಲ್ಲಿಸಲು 15 ದಿನ ಅವಕಾಶ

ದಾವಣಗೆರೆ : ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲೆಯ ಜಿಲ್ಲಾ ಪಂಚಾಯಿತಿಯ ಚುನಾಯಿತ ಸದಸ್ಯರ ಸಂಖ್ಯೆಯನ್ನು ಹಾಗೂ ಜಿಲ್ಲಾ ಪಂಚಾಯಿತಿಯ ಚುನಾವಣಾ ಕ್ಷೇತ್ರ ಮತ್ತು ತಾಲ್ಲೂಕು ಪಂಚಾಯಿತಿ ಚುನಾಯಿತ ಸದಸ್ಯರ ಸಂಖ್ಯೆಯನ್ನು ಹಾಗೂ ತಾಲ್ಲೂಕು ಪಂಚಾಯಿತಿಯ ಚುನಾವಣಾ ಕ್ಷೇತ್ರದ ವ್ಯಾಪ್ತಿಯನ್ನು ನಿಗದಿಪಡಿಸಿ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಣೆ ಹೊರಡಿಸಲಾಗಿರುತ್ತದೆ.

ಜಿಲ್ಲೆಯ ಜಿಲ್ಲಾ ಪಂಚಾಯಿತಿ ಚುನಾಯಿತ ಸದಸ್ಯರ ಸಂಖ್ಯೆ ಪ್ರಾದೇಶಿಕ ಚುನಾವಣಾ ತಾಲ್ಲೂಕು ಪಂಚಾಯಿತಿ ಚುನಾಯಿತ ಸದಸ್ಯರ ಸಂಖ್ಯೆ ಮತ್ತು ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆಯ ದಿನಾಂಕದಿಂದ 15 ದಿವಸಗಳ ಒಳಗಾಗಿ ಆನ್ ಲೈನ್ ಮೂಲಕ ಅಥವಾ ಖುದ್ದಾಗಿ/ಅಂಚೆಯ ಮೂಲಕ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ, 3ನೇ ಗೇಟ್, 2ನೇ ಮಹಡಿ ಕೊಠಡಿ ಸಂಖ್ಯೆ:222/ಎ, ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀಧಿ ಬೆಂಗಳೂರು-560001 ಸಲ್ಲಿಸಬಹುದು.

ವೆಬ್ ಸೈಟ್ http://rdpr.karnataka.gov.in/rdc/public ಮುಖಪುಟದ ಎಡಭಾಗದಲ್ಲಿರುವ ಸಾರ್ವಜನಿಕ ಸಲಹೆಗಳು ಎಂಬ ಶೀರ್ಷಿಕೆಯನ್ನು ಕ್ಲಿಕ್ ಮಾಡಿ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದೆಂದು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top