Connect with us

Dvgsuddi Kannada | online news portal | Kannada news online

ನಾಳೆ ದಾವಣಗೆರೆಯಲ್ಲಿ ಈ ಪ್ರದೇಶದಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ; ನೀವೂ ಭಾಗವಹಿಸಿ..!

Karnataka Flag

ದಾವಣಗೆರೆ

ನಾಳೆ ದಾವಣಗೆರೆಯಲ್ಲಿ ಈ ಪ್ರದೇಶದಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ; ನೀವೂ ಭಾಗವಹಿಸಿ..!

ದಾವಣಗೆರೆ; ಜಿಲ್ಲೆಯಾದ್ಯಂತ ಕೋಟಿಕಂಠ ಗಾಯನ ಕಾರ್ಯಕ್ರಮವನ್ನು ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಏಕಕಾಲಕ್ಕೆ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನ, ಪೊಲೀಸ್ ವರಿಷ್ಠಾಧಿಕಾರಿಗಳ ಕಾರ್ಯಲಯ, ಜಿಲ್ಲಾ ಕ್ರೀಡಾಂಗಣ, ಮಹಾನಗರ ಪಾಲಿಕೆ, ತಹಶೀಲ್ದಾರ ಕಾರ್ಯಲಯದ ಆವರಣ, ಕನ್ನಡ ಸಾಹಿತ್ಯ ಪರಿಷತ್ತು ಆವರಣದಲ್ಲಿ ಮತ್ತು ಎಲ್ಲಾ ಶಾಲಾ-ಕಾಲೇಜುಗಳು, ವಿಶ್ವವಿದ್ಯಾಲಯ, ಸರಕಾರಿ ಕಚೇರಿಗಳಲ್ಲಿ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರಾರಂಭಿಸಲಾಗುವುದು. ಕನ್ನಡ ನಾಡು ನುಡಿಯ ಶ್ರೇಷ್ಠತೆ ಸಾರುವ ಒಟ್ಟು ಆರು ಕನ್ನಡ ಗೀತೆಗಳ ಗಾಯನ ನಡೆಯಲಿದೆ. ಎಲ್ಲಾ ಕನ್ನಡ ಪರ ಸಂಘಟನೆಗಳು, ಕಾರ್ಮಿಕರು, ಸಂಘ-ಸಂಸ್ಥೆಗಳು, ಮಹಿಳಾ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top