Connect with us

Dvgsuddi Kannada | online news portal | Kannada news online

ಕನ್ನಡ ಶಾಲೆ ಉಳಿಸಲು ಗೋಕಾಕ್ ಮಾದರಿ ಚಳವಳಿ; ದಾವಣಗೆರೆಯಲ್ಲಿ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಹೇಳಿಕೆ

ಪ್ರಮುಖ ಸುದ್ದಿ

ಕನ್ನಡ ಶಾಲೆ ಉಳಿಸಲು ಗೋಕಾಕ್ ಮಾದರಿ ಚಳವಳಿ; ದಾವಣಗೆರೆಯಲ್ಲಿ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಹೇಳಿಕೆ

ದಾವಣಗೆರೆ: ರಾಜ್ಯದ ಕನ್ನಡ ಶಾಲೆ ಉಳಿಸಲು ಗೋಕಾಕ್ ಚಳವಳಿ ಮಾದರಿಯಲ್ಲಿ ಚಳವಳಿ ನಡೆಯಬೇಕಿದೆ ಎಂದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಹೇಳಿದ್ದಾರೆ.

ತಾಲೂಕಿನ ಎಲೆಬೇತೂರು ಗ್ರಾಮದಲ್ಲಿ ನಡೆದ ದಾವಣಗೆರೆ ಜಿಲ್ಲಾ 11 ನೇ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡ ಶಾಲೆ ಉಳಿಸುವ ವಿಚಾರವಾಗಿ ಇಷ್ಟರಲ್ಲಿಯೇ ಸಭೆ ನಡೆಸಲಾಗುವುದು.ಸಭೆಯ ಅಧ್ಯಕ್ಷತೆಯನ್ನು ಕಾದಂಬರಿಗಾರ ಎಸ್.ಎಲ್ ಭೈರಪ್ಪ ವಹಿಸಲಿದ್ದಾರೆ‌. ಕೊರೊನಾ ಕಾಲದಲ್ಲಿ ಶೇ. 20 ರಷ್ಟು ಮಕ್ಕಳು ಕನ್ನಡ ಶಾಲೆಗಳಿಂದ ದೂರ ಉಳಿದಿದ್ದಾರೆ. ಗ್ರಾಮೀಣ ‌ಪ್ರದೇಶದ ಜನತೆ ಇಂಗ್ಲಿಷ್ ಶಿಕ್ಷಣದ ಬಗ್ಗೆ ವ್ಯಾಮೋಹ ಹೆಚ್ಚಾಗಿದೆ.ಇಂತಹ ಪರಿಸ್ಥಿತಿಯಲ್ಲಿ ಗೋಕಾಕ ಚಳವಳಿ ಮಾದರಿಯಲ್ಲಿ ಇನ್ನೊಂದು ಚಳವಳಿ ಕನ್ನಡ ಶಾಲೆಗಳಿಗೆ ಆಗಬೇಕಾಗಿದೆ ಎಂದರು.

ಸಿರಿಗೆರೆ ತರಳುಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ವಿಶ್ವ ಕನ್ನಡ ಸಮ್ಮೇಳನ ದಾವಣಗೆರೆಯಲ್ಲಿ ನಡೆದರೆ ಒಳ್ಳೆಯದು. ದಾವಣಗೆರೆ ರಾಜ್ಯದ ಹೃದಯ ಭಾಗ. ಇಂತಹ ಸ್ಥಳದಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆಯುವುದು ಸೂಕ್ತ. ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತು ಸೂಕ್ತ ನಿರ್ಧಾರ ಕೈಗೊಳ್ಳಲಿ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top