ದಾವಣಗೆರೆ: ತ್ರೈಮಾಸಿಕ ಕೆಡಿಪಿ ಸಭೆ | ದುರಸ್ಥಿಯಾದ ಶುದ್ಧ ಕುಡಿಯುವ ನೀರಿನ ಘಟಕ; ಪರಿಕರ ಲ್ಯಾಬ್‍ನಲ್ಲಿ ಪರಿಶೀಲಿಸಲು ಜಿಲ್ಲಾ ಉಸ್ತುವಾರಿ ಸಚಿವ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
4 Min Read

ದಾವಣಗೆರೆ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಪದೇ ಪದೇ ದುರಸ್ಥಿಗೆ ಒಳಗಾಗುತ್ತಿದ್ದು ಕಳಪೆ ಗುಣಮಟ್ಟದ ಪರಿಕರಗಳನ್ನು ಅಳವಡಿಕೆ ಇದಕ್ಕೆ ಕಾರಣವಾಗಿದೆ. ಈ ರೀತಿ ಅಳವಡಿಸುವ ಪರಿಕರಗಳ ಗುಣಮಟ್ಟದ ಬಗ್ಗೆ ಲ್ಯಾಬ್‍ಗಳಲ್ಲಿ ಪರೀಕ್ಷಿಸಲು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸೂಚನೆ ನೀಡಿದರು.

ದಾವಣಗೆರೆ: ಒಳ‌ಮೀಸಲಾತಿ ವಿರುದ್ಧ ಬಂಜಾರ ಸಮುದಾಯ ಕಿಡಿ; ಸಿಎಂ ಸಿದ್ದರಾಮಯ್ಯ, ಸಚಿವರು ಸೇವಾಲಾಲ್‌ ಜಯಂತ್ಯುತ್ಸವ ವೇದಿಕೆ ಏರಲು ಬಿಡಲ್ಲ

ಸೋಮವಾರ ಜಿಲ್ಲಾ ಪಂಚಾಯತ್‍ನಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 791 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅಳವಡಿಸಲಾಗಿದ್ದು, ಹಲವು ಕಡೆ ಖಾಸಗಿಯವರಿಗೆ ನಿರ್ವಹಣೆಗಾಗಿ ಗುತ್ತಿಗೆ ನೀಡಲಾಗಿದೆ. ಆದರೆ ದುರಸ್ಥಿಯಾದಾಗ ಕಳಪೆ ಪರಿಕರಗಳನ್ನು ಅಳವಡಿಸುವುದಿರಂದ ಪದೇ ಪದೇ ದುರಸ್ಥಿಗೆ ಒಳಗಾಗಿ ಜನರ ನೀರಿಗೆ ಸಮಸ್ಯೆಯಾಗುತ್ತಿದೆ ಎಂದು ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ಸಭೆಯಲ್ಲಿ ಪ್ರಸ್ತಾಪಿಸಿದರು.

ದಾವಣಗೆರೆ:ಕೊಂಡಜ್ಜಿ ಪೊಲೀಸ್ ಪಬ್ಲಿಕ್ ಶಾಲೆಗೆ ಶಿಕ್ಷಕರ ಭರ್ತಿಗೆ ಅರ್ಜಿ ಆಹ್ವಾನ

ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿ ಚನ್ನಗಿರಿ ತಾಲ್ಲೂಕಿನಲ್ಲಿ ಉತ್ತಮವಾಗಿವೆ, ಅದಕ್ಕಾಗಿ ಈಗ ನಿರ್ವಹಿಸುತ್ತಿರುವ ಏಜೆನ್ಸಿಯವರು ಅಳವಡಿಸುವ ಪರಿಕರಗಳ ಬಗ್ಗೆ ಲ್ಯಾಬ್‍ನಲ್ಲಿ ಪರೀಕ್ಷಿಸುವಂತೆ ಸೂಚನೆ ನೀಡಿದರು.

ಅರ್ಹ ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗಬಾರದು

ಹಾಸ್ಟೆಲ್ ಪ್ರವೇಶಕ್ಕಾಗಿ ವಿದ್ಯಾರ್ಥಿಗಳು ಅನೇಕ ಶಿಫಾರಸುನೊಂದಿಗೆ ಆಗಮಿಸುತ್ತಿದ್ದು ಯಾವುದೇ ಅರ್ಹ ವಿದ್ಯಾರ್ಥಿಗಳು ಹಾಸ್ಟೆಲ್ ಪ್ರವೇಶದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕೆಂದು ಬಿಸಿಎಂ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು. ಈ ವೇಳೆ ಮಾಯಕೊಂಡ ಶಾಸಕರು ಸಭೆಯಲ್ಲಿ ಪ್ರಸ್ತಾಪಿಸಿ ಬಸವಾಪಟ್ಟಣ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿಗಳ ಊಟಕ್ಕೆ ಗುತ್ತಿಗೆದಾರರು ಬಸ್‍ನಲ್ಲಿ ಅಡುಗೆ ಸಾಮಗ್ರಿ ಕಳುಹಿಸಿದಲ್ಲಿ ಮಾತ್ರ ಊಟ, ಇಲ್ಲವೆಂದರೆ ಇಲ್ಲ. ಆ ಬಸ್‍ಗಾಗಿ ಮಕ್ಕಳು ಕಾಯುತ್ತಿರುತ್ತಾರೆ. ವಾರ್ಡನ್ ಸ್ಥಳೀಯವಾಗಿ ಅಂಗಡಿಯಿಂದ ಸಾಮಗ್ರಿ ಖರೀದಿ ಮಾಡಿ ಹಾಸ್ಟೆಲ್ ನಡೆಸುತ್ತಾರೆ. ಆದರೆ ಆಹಾರ ಪೂರೈಕೆಯಾಗಿ ಟೆಂಡರ್ ಕರೆದಿದ್ದರೂ ಎಲ್ಲೊ ಕುಳಿತು ಕಾಗದದಲ್ಲಿ ವ್ಯವಹಾರ ಮಾಡುತ್ತಿರುತ್ತಾರೆ. ಇದು ಎಲ್ಲಾ ಇಲಾಖೆಗಳ ಹಾಸ್ಟೆಲ್‍ನಲ್ಲಿ ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ಟೆಂಡರ್ ಕರೆದು ಟೆಂಡರ್ ದಾರರೇ ಸಾಮಗ್ರಿ ಹಾಸ್ಟೆಲ್‍ಗೆ ನೀಡುವಂತಾಗಬೇಕು‌ ಎಂದರು.

ಶಿಶು, ತಾಯಿ ಮರಣ ಶೂನ್ಯಕ್ಕೆ ತರಬೇಕು

ಶಿಶು ಜನನಗ ಸಂದರ್ಭದಲ್ಲಿ ಶಿಶು ಮತ್ತು ತಾಯಿ ಮರಣ ಪ್ರಮಾಣ ಶೂನ್ಯಕ್ಕೆ ತಗ್ಗಬೇಕು. ಈ ಬಗ್ಗೆ ಆರೋಗ್ಯ ಇಲಾಖೆಯವರು ಕ್ರಮ ವಹಿಸಬೇಕು. ಯಾವಾಗ ನಿರ್ಲಕ್ಷ್ಯತೆ ಇರುತ್ತದೆ, ಆವಾಗ ತಾಯಿ ಮತ್ತು ಶಿಶು ಮರಣ ಪ್ರಕರಣಗಳು ನಡೆಯುತ್ತವೆ. ಆರೋಗ್ಯಾಧಿಕಾರಿಗಳು ಮರಣ ಪ್ರಮಾಣ ಕಡಿಮೆಯಾಗಿದೆ ಎಂದಾಗ ಸಚಿವರು ಶಿಶು ಮತ್ತು ತಾಯಿ ಮರಣ ಪ್ರಕರಣಗಳು ಸಂಭವಿಸಬಾರದೆಂದು ಸೂಚನೆ ನೀಡಿದರು.

ಸಿಎಸ್‍ಆರ್ ನಿಧಿಯಡಿ ಪೂರೈಕೆಯಾದ ಆರೋಗ್ಯ ಪರಿಕರಗಳು ಕೆಲವು ಕಳಪೆಯಾಗಿದ್ದರೆ, ಕೆಲವು ಕಡೆ ಇದರ ಉಪಯೋಗ ಮಾಡಿಕೊಳ್ಳುತ್ತಿಲ್ಲ. ಆರೋಗ್ಯ ಇಲಾಖೆಯವರು ಕಳಪೆ ಪರಿಕರಗಳನ್ನು ಸ್ವೀಕರಿಸದಿರಲು ಸೂಚನೆ ನೀಡಿ ಹಿಂದೆ ವೈದ್ಯರನ್ನು ನೇಮಕ ಮಾಡಿಕೊಳ್ಳಲು ರೆಡ್ ಕಾರ್ಪೆಟ್ ಹಾಕಿ ಆಹ್ವಾನಿಸಲಾಗುತ್ತಿತ್ತು, ಆದರೆ ಈಗ ಎಲ್ಲಾ ಕಡೆ ವೈದ್ಯರಿದ್ದಾರೆ. ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಆಯಾ ಶಾಸಕರನ್ನು ಭೇಟಿ ಮಾಡಿ ಅಲ್ಲಿಗೆ ಬೇಕಾದ ಸೌಕರ್ಯ ಕಲ್ಪಿಸಲು ಸೂಚನೆ ನೀಡಿದರು.

ಈ ವೇಳೆ ಹರಿಹರ ಶಾಸಕರಾದ ಬಿ.ಪಿ.ಹರೀಶ್ ಅವರು ಮಾತನಾಡಿ ಇತ್ತೀಚೆಗೆ ಮುಖ್ಯ ವೈದ್ಯಾಧಿಕಾರಿ ನಿವೃತ್ತಿಯಾಗಿದ್ದು ಹಣವನ್ನು ಸಂಪೂರ್ಣವಾಗಿ ಖರ್ಚು ಮಾಡಿ ಹೋಗಿದ್ದಾರೆ ಎಂದಾಗ ಈ ಬಗ್ಗೆ ಪರಿಶೀಲನೆ ನಡೆಸಲು ಆರೋಗ್ಯಾಧಿಕಾರಿಗೆ ಸೂಚನೆ ನೀಡಿದರು.

ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ಜಗಳೂರಿನಲ್ಲಿ ಏಕಲವ್ಯ ಶಾಲೆ ಪ್ರಾರಂಭಿಸಲು ಪ್ರಸ್ತಾವನೆ ಸಲ್ಲಿಸಲಾಗಿತ್ತು, ಅದರ ಸ್ಥಿತಿಗತಿ ಬಗ್ಗೆ ಪರಿಶಿಷ್ಟ ಪಂಗಡ ಅಭಿವೃದ್ದಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಸರ್ಕಾರದ ಹಂತದಲ್ಲಿ ಮಂಜೂರಾತಿಗೆ ಕ್ರಮ ವಹಿಸಬೇಕೆಂದಾಗ ಜಿಲ್ಲಾ ಉಸ್ತುವಾರಿ ಸಚಿವರು ಇದರಿಂದ ಉತ್ತಮ ಶಾಲಾ ಸೌಕರ್ಯ ಸಿಗಲಿದೆ ಎಂದರು.

ಚಿಗಟೇರಿ ಆಸ್ಪತ್ರೆ ಬಳಿ ಬೀದಿ ನಾಯಿಗಳು ಮತ್ತು ಹಂದಿಗಳು ಹೆಚ್ಚಾಗಿವೆ ಮತ್ತು ಚನ್ನಗಿರಿ ರಸ್ತೆಯಲ್ಲಿ, ನಗರದಲ್ಲಿನ ಮಾಂಸದ ಅಂಗಡಿಗಳ ಬಳಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಮಹಿಳೆಯರು, ಮಕ್ಕಳು ಓಡಾಡುವುದು ಕಷ್ಟವಾಗಿದೆ ಎಂದು ಸಂಸದರು ಸಭೆಯಲ್ಲಿ ಪ್ರಸ್ತಾಪಿಸಿದಾಗ ಜಿಲ್ಲಾಧಿಕಾರಿಯವರು ನಾಯಿಗಳನ್ನು ವಾರದಲ್ಲಿ ಸೆರೆಹಿಡಿದು ಪ್ರತ್ಯೇಕವಾಗಿ ಸಾಕಾಣಿಕೆ ಮಾಡಲು ರೂ.80 ಲಕ್ಷ ನೀಡಿದ್ದು ಸೆರೆಹಿಡಿಯಲು ಕ್ರಮ ವಹಿಸಲಾಗುತ್ತದೆ ಎಂದರು.

ವಾಣಿಜ್ಯ ತೆರಿಗೆ ಇಲಾಖೆಯಿಂದ ವಾರ್ಷಿಕವಾಗಿ 372 ಕೋಟಿ ತೆರಿಗೆ ಸಂಗ್ರಹ ಗುರಿಗೆ ಈಗಾಗಲೇ 344 ಕೋಟಿ ಸಂಗ್ರಹವಾಗಿದೆ. ಆದರೆ ಸಣ್ಣ ಸಣ್ಣ ಸ್ಥಳೀಯ ಅಡಿಕೆ ವ್ಯಾಪಾರಿಗಳ ವಾಹನಗಳನ್ನು ತಡೆದು ತೆರಿಗೆ, ತಂಡ ಹಾಕುತ್ತಿರುವ ವಿಷಯ ಗಮನಕ್ಕೆ ಬಂದಿದ್ದು ಸಣ್ಣಪುಟ್ಟ ವ್ಯಾಪಾರಿಗಳ ಮೇಲೆ ದಂಡ ಹಾಕದಿರಲು ಚನ್ನಗಿರಿ ಶಾಸಕರಾದ ಬಸವರಾಜ ವಿ.ಶಿವಗಂಗಾ ತಿಳಿಸಿದರು.

ಹೊನ್ನಾಳಿ ಶಾಸಕರಾದ ಜಿ.ಡಿ.ಶಾಂತನಗೌಡ ಮಾತನಾಡಿ ತಾಲ್ಲೂಕು ಮತ್ತು ಹೋಬಳಿ ಮಟ್ಟದಲ್ಲಿರುವ ಹಾಸ್ಟೆಲ್‍ಗಳನ್ನು ನಗರಕ್ಕೆ ಸ್ಥಳಾಂತರಿಸಬಾರದು, ಇದರಿಂದ ಅಲ್ಲಿನ ಶಾಲೆ, ಕಾಲೇಜುಗಳಿಗೆ ತೊಂದರೆಯಾಗಲಿದೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಕುರಿತು ಮಾತನಾಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಶಾಮನೂರು ಬಸವರಾಜ್ ಟಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *