ದಾವಣಗೆರೆ: ಜಗತ್ತಿನಲ್ಲಿ ಮನುಕುಲ ಇರುವವರೆಗೂ ಬಸವಣ್ಣ, ಶ್ರೀ ಕೃಷ್ಣದೇವರಾಜ ಒಡೆಯರಂತೆಯೇ ಕೆಂಪೇಗೌಡರು ಕೂಡ ಅಜರಾಮರವಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಮಾಂತೇಶ್ ಬೀಳಗಿ ಹೇಳಿದರು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸಸ್ಕೃತಿ ಇಲಾಖೆ ಹಾಗೂ ಮಹಾನಗರಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾನಮನ ಸಲ್ಲಿಸಿ ಅವರು ಮಾತನಾಡಿದರು.
ಸರ್ಕಾರದ ಜಯಂತಿ ಅಂದರೆ ಅದರದೇ ಆದ ಶಿಷ್ಟಚಾರಗಳು ಇರುತ್ತದೆ. ಮಹಾನ್ಚೇತನರು ಅಭಿವೃದ್ಧಿ ಕೆಲಸವನ್ನು ಮಾಡುವ ಮೂಲಕ ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅವರ ಸಾಧನೆಯನ್ನು ಈಗಿನ ಪೀಳಿಗೆಗೆ ತಿಳಿಸುವ ನಿಟ್ಟಿನಲ್ಲಿ ಜಯಂತಿಗಳನ್ನು ಆಚರಿಸಲಾಗುತ್ತದೆ. ವಿಶ್ವದಲ್ಲಿ ಮನುಕುಲ ಇರುವವರೆಗೂ ಬಸವಣ್ಣ, ಶ್ರೀ ಕೃಷ್ಣದೇವರಾಜ ಒಡೆಯರಂತೆ ಕೆಂಪೇಗೌಡರು ಕೂಡ ಅಜರಾಮರವಾಗಿರುತ್ತಾರೆ ಎಂದು ಹೇಳಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಮಾತನಾಡಿ, ವಿಜಯನಗರ ಸಾಮ್ರಾಜ್ಯದ ಸಮಯದಲ್ಲಿ ಬೆಂಗಳೂರಿಗೆ ದೊಡ್ಡ ಕೊಡುಗೆಗಳನ್ನು ನೀಡಿ ರಾಜಧಾನಿಯಾಗಿ ಮಾಡಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಜಯಮ್ಮ ಗೋಪಿನಾಯ್ಕ್, ಸಮಾಜದ ಅಧ್ಯಕ್ಷ ಅಶೋಕ್ ಮಾತನಾಡಿದರು. ಮಹಾನಗರ ಪಾಲಿಕೆ ಸದಸ್ಯೆ ಯಶೋಧ, ಡಿಯುಡಿಸಿ ಅಧಿಕಾರಿ ನಜ್ಮಾ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ರೇಷ್ಮಾ ಕೌಸರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಕನ್ನಡಪರ ಸಂಘದ ರಾಮೇಗೌಡ, ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ವಿಶ್ವನಾಥ್, ಜಿಲ್ಲಾಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.



