Connect with us

Dvgsuddi Kannada | online news portal | Kannada news online

ಇಂದಿನಿಂದ ಮೂರು ದಿನ  ದಾವಣಗೆರೆಯಲ್ಲಿ ಖಾದಿ ಉತ್ಪನ್ನಗಳ ಮಾರಾಟ, ಪ್ರದರ್ಶನ

ದಾವಣಗೆರೆ

ಇಂದಿನಿಂದ ಮೂರು ದಿನ  ದಾವಣಗೆರೆಯಲ್ಲಿ ಖಾದಿ ಉತ್ಪನ್ನಗಳ ಮಾರಾಟ, ಪ್ರದರ್ಶನ

ದಾವಣಗೆರೆ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಖಾದಿ ಸಂಘ-ಸಂಸ್ಥೆಗಳನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಹಾಗೂ ಗಾಂಧೀಜಿಯವರ ಕನಸನ್ನು ಸಾಕಾರಗೊಳಿಸಲು ಅ. 04 ರಿಂದ 06 ರವರೆಗೆ 03 ದಿನಗಳ ಕಾಲ ಜಿಲ್ಲಾಡಳಿತ ಭವನ ಆವರಣದಲ್ಲಿ ಖಾದಿ ಮಾರಾಟ ಹಾಗೂ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾದಿ ಸಂಘ-ಸಂಸ್ಥೆಗಳ ಮಾಲೀಕರು ಖಾದಿ ಉತ್ಪನ್ನ ಮಾರಾಟ ಮಾಡಲು ಖಾದಿ ಮಳಿಗೆಗಳನ್ನು ತೆರೆದಿದ್ದು, ಜಿಲ್ಲೆಯ ಸಾರ್ವಜನಿಕರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಖಾದಿ ಬಟ್ಟೆಯನ್ನು ಖರೀದಿಸುವ ಮೂಲಕ ಖಾದಿ ಕಸಬುದಾರರಿಗೆ ನೆರವಾಗಬೇಕು ಎಂದು ಖಾದಿ ಮಂಡಳಿ ಜಿಲ್ಲಾ ಅಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top