ದಾವಣಗೆರೆ: ರಾಜ್ಯದಲ್ಲಿ ಅಮಾವಾಸ್ಯೆ ಬಳಿಕ ಮಳೆ ಬರಲಿದೆ ಆತಂಕಪಡುವ ಅಗತ್ಯವಿಲ್ಲ. ಕಾರ್ತಿಕ, ಸಂಕ್ರಾಂತಿ ವೇಳೆಗೆರಾಜ್ಯದಲ್ಲಿ ಕೆಲ ಅವಘಢಗಳು ನಡೆಯುವ ಸಾಧ್ಯತೆ ಇದೆ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಜಿಲ್ಲೆಯ ಹೊನ್ನಾಳಿ ಪಟ್ಟಣದ ಭಕ್ತರೊಬ್ಬರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮನುಷ್ಯ ಮಾಡಿದ ತಪ್ಪುಗಳಭಗವಂತ ಕ್ಷಮಿಸುತ್ತಾನೆ ಆದರೆ ತಿಳಿದೂ ತಪ್ಪುಗಳನ್ನು ಮಾಡಿದಾಗ ಕ್ಷಮಿಸಲಾರ, ಇತ್ತೀಚಿನ ದಿನಗಳಲ್ಲಿ ಗೊತ್ತಿದ್ದೂ ಮನುಷ್ಯ ಪ್ರಕೃತಿ, ನೆಲ, ಜಲ ಇವುಗಳ ನಿರಂತರ ದುರುಪಯೋಗದ ಕಾರಣ ನಾವು ಅನೇಕ ರೀತಿಯ ಪ್ರಕೃತಿ ವಿಕೋಪ ಎದುರಿಸುವಂತಾಗಿದೆ ಎಂದರು.
ಯಾವುದು ಮನುಷ್ಯನಿಗೆ, ಸಮಾಜಕ್ಕೆ ಶಾಂತಿ, ನೆಮ್ಮದಿ ನೀಡುತ್ತದೆಯೋ ಅದೇ ಧರ್ಮ. ನೂರಾರು ವರ್ಷಗಳಲ್ಲಿ ಹೇಳಿದ್ದು ಸತ್ಯ ಕಾಲಜ್ಞಾನವೇ ಗುರುಗಳ ಸಂಪತ್ತಾಗಿದ್ದು, ಕಾಲಜ್ಞಾನದಲ್ಲಿ ಕಟ್ಟಿಗೆ ಹಾಡುತ್ತದೆ ಕಬ್ಬಿಣವು ಓಡುತ್ತದೆ, ಗಾಳಿ ಮಾತನಾಡುತ್ತದೆ ಎಂದು ನೂರಾರು ವರ್ಷಗಳಲ್ಲಿ ಹೇಳಲಾಗಿದ್ದು ಇದು ಸತ್ಯವಾಗಿದೆ. ಕಟ್ಟಿಗೆ ಮತ್ತು ಕಬ್ಬಿಣ ಅಂದರೆ ಇಂದು ರೈಲುಗಳು ಬಂದಿರುವ ಬಗ್ಗೆಯಾದರೆ, ಗಾಳಿ ಮಾತನಾಡುತ್ತದೆ ಎಂದರೆ ಮೊಬೈಲ್ ಬಂದಿರುವುದಕ್ಕೆ ಸಾಕ್ಷಿ. ಇದೆ ರೀತಿ ಕಲ್ಲಿನ ಕೋಳಿ
ಕೂಗುತ್ತದೆ ಎಂದರೆ ಮೊಬೈಲ್ನಲ್ಲಿರುವ ಸಿಮ್ ಗಳಾಗಿವೆಎ೦ದು ಕೋಡಿ ಶ್ರೀಗಳು ವಿವರಿಸಿದರು.
ನೀರಿನ ಮೇಲೆ ದೊಣಿ ಇರಬೇಕೇ ಹೊರತು ದೋಣಿಯೊಳಗೆ ನೀರು ಬಂದರೆ ಆಪಾಯ ತಪ್ಪದು. ರಾಜಕಾರಣಿಗಳಾಗಲಿ, ಗುರುಗಳಾಗಲಿ ಸಮಾಜದಲ್ಲಿ ಶಾಂತಿ ನಿರ್ಮಿಸುವ ಹೇಳಿಕೆ ನೀಡಬೇಕು. ಆಳುವ ಸರ್ಕಾರಗಳು ಏನೇ ಯೋಜನೆಗಳನ್ನು ಜಾರಿಗೆ ತಂದರೂ ತೊಂದರೆ ಇಲ್ಲ. ಕಾರಣ ನಮ್ಮ ಕರ್ನಾಟಕ ಪ್ರಾಕೃತಿಕವಾಗಿ ಎಲ್ಲಾ ರೀತಿಯಲ್ಲಿ ಸಮೃದ್ಧವಾಗಿದ್ದು, ಇದನ್ನು ಸಮರ್ಪಕವಾಗಿ ಬಳಿಸಿಕೊಂಡಾಗ ಯಾವುದೇ ತೊಂದರೆ ಆಗದು ಎಂದರು.
ದಾವಣಗೆರೆ: ಜಿಲ್ಲಾ, ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ; ಪ್ರಥಮ ಬಹುಮಾನ 31 ಸಾವಿರ..!
ದಾವಣಗೆರೆ: ಎಲ್ಲ ಸರ್ಕಾರಗಳು ರೈತರಿಗೆ ನೀಡುವ ಭರವಸೆಗಳು, ಭರವಸೆಗಳಾಗಿಯೇ ಉಳಿದಿವೆ ; ಸಾಣೇಹಳ್ಳಿ ಶ್ರೀ



