ದಾವಣಗೆರೆ: ಕೇಂದ್ರ ಮಾಜಿ ಸಚಿವ ಕೊಂಡಜ್ಜಿ ಬಸಪ್ಪ 39ನೇ ಸ್ಮರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಕೊಂಡಜ್ಜಿ ಬಸಪ್ಪ ಸ್ಕೌಟ್ಸ್ ಗೈಡ್ಸ್ ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ಸ್ಕೌಟ್ಸ್ – ಗೈಡ್ಸ್ ಮತ್ತು ರೋವರ್ಸ್ – ರೇಂಜರ್ಸ್ ರಾಜ್ಯ ಮಟ್ಟದ ಪದಕ ತರಬೇತಿ ಶಿಬಿರ ಹಾಗೂ ಕೇಂದ್ರ ಮಾಜಿ ಸಚಿವ ಕೊಂಡಜ್ಜಿ ಬಸಪ್ಪ ಅವರ 39ನೇ ಸ್ಮರಣೆ ಅಂಗವಾಗಿ ಸರ್ವಧರ್ಮ ಪ್ರಾರ್ಥನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಸದ ಜಿ.ಎಂ.ಸಿದ್ದೇಶ್ವರ ಭಾಗವಹಿಸಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಪಿ.ಜಿ‌.ಆರ್ ಸಿಂಧ್ಯಾ, ಎಂಎಲ್ ಸಿ ಮೋಹನ್ ಕೊಂಡಜ್ಜಿ, ಭಾರತ್ ಸ್ಕೌಟ್ಸ್ ಗೈಡ್ಸ್ ಸಮಿತಿಯ ಸದಸ್ಯರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕೊಂಡಜ್ಜಿ ಬಸಪ್ಪ ಅವರು ಸಂಸದರಾಗಿ ಕೇಂದ್ರ, ರಾಜ್ಯ ಸಚಿವರಾಗಿ ಹಾಗೂ ಸ್ಕೌಟ್ಸ್ – ಗೈಡ್ಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಇದಲ್ಲದೆ ಸಮಾಜ ಸೇವೆ, ಪಂಚಾಯತ್ ರಾಜ್ ಸ್ಥಾಪನೆಯಲ್ಲಿ ಹಾಗೂ ಸಹಕಾರ ಕ್ಷೇತ್ರದಲ್ಲಿ ತಮ್ಮದೇ ಸೇವೆ ಸಲ್ಲಿಸಿ ರಾಜ್ಯ ಹಾಗೂ ಜಿಲ್ಲೆಗೆ ಮಾದರಿ ರಾಜಕಾರಣಿಯಾಗಿ ಬದುಕಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *