Connect with us

Dvgsuddi Kannada | online news portal | Kannada news online

ಕೊಂಡಜ್ಜಿ ಕೆರೆ ಬಾಗಿನ: ಹರಿಹರ ತಾಲ್ಲೂಕಿನ ಸಮಗ್ರ ನೀರಾವರಿ ಕಲ್ಪಿಸಲು ಪ್ರಯತ್ನ: ಸಂಸದೆ ಪ್ರಭಾ ಮಲ್ಲಿಕಾರ್ಜುನ್

ಹರಿಹರ

ಕೊಂಡಜ್ಜಿ ಕೆರೆ ಬಾಗಿನ: ಹರಿಹರ ತಾಲ್ಲೂಕಿನ ಸಮಗ್ರ ನೀರಾವರಿ ಕಲ್ಪಿಸಲು ಪ್ರಯತ್ನ: ಸಂಸದೆ ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಹರಿಹರ ತಾಲ್ಲೂಕಿನ ಕೊಂಡಜ್ಜಿ ಕೆರೆ ಸೇರಿದಂತೆ ತಾಲೂಕಿಗೆ ಸಮಗ್ರ ನೀರಾವರಿ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭರವಸೆ ನೀಡಿದರು.

ಕೊಂಡಜ್ಜಿ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಕೊಂಡಜ್ಜಿ‌ ಕೆರೆ ಸುತ್ತಮುತ್ತಲಿನ‌ ಗ್ರಾಮಗಳ‌ ಜೀವನಾಡಿಯಾಗಿದ್ದು, ಜಿಲ್ಲೆಯಲ್ಲಿ ಸುರಿದ ಮಳೆಗೆ ಕೆರೆ ಭರ್ತಿಯಾಗಿದ್ದು ಖುಷಿ ವಿಚಾರ. ಕೆರೆಗಳ ಭರ್ತಿಯಿಂದ ರೈತರ ಬದುಕು ಹಸನಾಗಲಿ ಎಂದರು.

ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕೆರೆಗಳು ಭರ್ತಿಯಾಗಿವೆ. ಭದ್ರಾ ಜಲಾಶಯವು ತುಂಬಿದ್ದು, ರೈತರಲ್ಲಿ ಸಂತಸ ಮೂಡಿದೆ. ಕೆರೆಗಳನ್ನು ಸಂರಕ್ಷಿಸುವುದು ಮಾತ್ರವಲ್ಲ, ಮುಂದಿನ ಪೀಳಿಗೆಗೂ ಕೆರೆ ಉಳಿಸಬೇಕಾದ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ಪ್ರಯತ್ನಿಸೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹರಿಹರ ಶಾಸಕ ಬಿ. ಪಿ. ಹರೀಶ್, ಮಾಜಿ ಶಾಸಕ ರಾಮಪ್ಪ, ನಿಖಿಲ್ ಕೊಂಡಜ್ಜಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಸಾರ್ವಜನಿಕರು, ಗ್ರಾಮದ ಮುಖಂಡರು ಹಾಜರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

To Top