ದಾವಣಗೆರೆ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಎಕ್ಸಲ್ ಏಕಾಏಕಿ ಕಟ್ ಆದ ಪರಿಣಾಮ ಬಸ್ ಪಲ್ಟಿಯಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ.
ದಾವಣಗೆರೆ: ಎರಡು ಕಾರುಗಳ ಭೀಕರ ಅಪಘಾತ ; ಇಬ್ಬರು ಯುವಕರು ಸ್ಥಳದಲ್ಲೇ ಸಾ*ವು
ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಇನ್ನೂ 50 ಜನರು ಗಾಯಗೊಂಡಿದ್ದಾರೆ. ದರ್ಶನ್ ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆ ಹಾಗೂ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದಾವಣಗೆರೆ: ಅವಧಿ ಮುಗಿದರೂ ಚೀಟಿ ಹಣ ಪಾವತಿಸದೆ ಸೇವಾ ನ್ಯೂನತೆ ತೋರಿದ ಸಂಸ್ಥೆಗೆ 35 ಸಾವಿರ ದಂಡ
ಬೆಳಿಗ್ಗೆ 9:30ರ ಸುಮಾರಿಗೆ ದಾವಣಗೆರೆಯಿಂದ ಬಸವಾಪಟ್ಟಣಕ್ಕೆ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಬಸ್ಸಿನ ಎಕ್ಸಲ್ ಕಟ್ ಆಗಿ ಪಲ್ಟಿಯಾಗಿದೆ. ತಕ್ಷಣವೇ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಜಿಲ್ಲಾಧಿಕಾರಿಗಳ ಭೇಟಿ
ವಿಷಯ ತಿಳಿಯುತ್ತಿದ್ದಂತೆಯೇ ದಾವಣಗೆರೆ ಜಿಲ್ಲಾಧಿಕಾರಿಗಳು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ಸ್ಥಿತಿಗತಿಯನ್ನು ವಿಚಾರಿಸಿದರು. ಅಪಘಾತಕ್ಕೊಳಗಾದ ಸಂತ್ರಸ್ತರಿಗೆ ಹಾಗೂ ಅವರ ಕುಟುಂಬದವರಿಗೆ ಧೈರ್ಯ ತುಂಬಿದ ಅವರು, ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಆಸ್ಪತ್ರೆಯ ವೈದ್ಯರೊಂದಿಗೆ ಚರ್ಚಿಸಿ, ಗಾಯಾಳುಗಳಿಗೆ ಯಾವುದೇ ವಿಳಂಬವಿಲ್ಲದೆ ತುರ್ತು ಮತ್ತು ಗುಣಮಟ್ಟದ ಚಿಕಿತ್ಸೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಗಂಭೀರವಾಗಿ ಗಾಯಗೊಂಡವರಿಗೆ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.



