Connect with us

Dvgsuddi Kannada | online news portal | Kannada news online

ದಾವಣಗೆರೆ; ಪ್ರಧಾನಿ ಚುನಾವಣಾ ರ್‍ಯಾಲಿ; ಎರಡು ದಿನ ಹೈಸ್ಕೂಲ್ ಮೈದಾನದ KSRTC ನಿಲ್ದಾಣ ಕಾರ್ಯಾಚರಣೆ ಇರಲ್ಲ; ಹೊಸ ನಿಲ್ದಾಣಕ್ಕೆ ಸ್ಥಳಾಂತರ

ದಾವಣಗೆರೆ

ದಾವಣಗೆರೆ; ಪ್ರಧಾನಿ ಚುನಾವಣಾ ರ್‍ಯಾಲಿ; ಎರಡು ದಿನ ಹೈಸ್ಕೂಲ್ ಮೈದಾನದ KSRTC ನಿಲ್ದಾಣ ಕಾರ್ಯಾಚರಣೆ ಇರಲ್ಲ; ಹೊಸ ನಿಲ್ದಾಣಕ್ಕೆ ಸ್ಥಳಾಂತರ

ದಾವಣಗೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 28 ರಂದು ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕಾನೂನು ಸುವ್ಯವಸ್ಥೆ ಹಾಗೂ ಸುಗಮ ಸಂಚಾರಕ್ಕಾಗಿ ಹೈಸ್ಕೂಲ್ ಮೈದಾನದಲ್ಲಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣವನ್ನು ಏಪ್ರಿಲ್ 27 ಮತ್ತು 28 ರಂದು ಮಾತ್ರ ನಿರ್ಮಾಣ ಹಂತದಲ್ಲಿನ ಹೊಸ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಲಾಗಿದೆ. ಇಲ್ಲಿಂದಲೇ ಎಲ್ಲಾ ಬಸ್‍ಗಳು ಕಾರ್ಯಾಚರಣೆ ಮಾಡಲಿವೆ ಎಂದು ಕೆ.ಎಸ್.ಆರ್.ಟಿ.ಸಿ.ವಿಭಾಗೀಯ ನಿಯಂತ್ರಣಾಧಿಕಾರಿ ಸಿ.ಇ ಶ್ರೀನಿವಾಸ್‍ಮೂರ್ತಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top