ದಾವಣಗೆರೆ: ಕೆಎಸ್ಆರ್ಟಿಸಿ ಬೆಂಗಳೂರು ಕೇಂದ್ರ ಘಟಕ ವ್ಯವಸ್ಥಾಪಕ ಎಚ್.ಸಿ. ತುಷಾರ್ (33) ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಪ್ರಕರಣವೊಂದರ ವಿಚಾರಣೆಗೆ ಶಿರಸಿಗೆ ಬಂದಿದ್ದ ಅವರು, ಬೆಂಗಳೂರಿಗೆ ವಾಪಸಾಗುವಾಗ ಮಾರ್ಗ ಮಧ್ಯೆ ದಾವಣಗೆರೆಯ ಬಸ್ ನಿಲ್ದಾಣದಲ್ಲಿ ನಿಧನರಾಗಿದ್ದಾರೆ. ತಲೆ ನೋವಿನಿಂದ ಆಯಾಸಗೊಂಡು ಕುಸಿದು ಬಿದ್ದಿದ್ದಾರೆ.ಬಸ್ ನಿರ್ವಾಹಕರು ಆಸ್ಪತ್ರೆಗೆ ಕರೆದೊಯ್ಯವಷ್ಟರಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ ಹಾಗೂ 4 ತಿಂಗಳ ಮಗು ಇದೆ.