ದಾವಣಗೆರೆ: ಮಕ್ಕಳೊಂದಿಗೆ ಸಾರಿಗೆ ನೌಕರರ  ಕುಟುಂಬಸ್ಥರು ತಟ್ಟೆ ಬಾರಿಸಿ ಪ್ರತಿಭಟನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಆರನೇ ವೇತನ ಆಯೋಗದ ಅನ್ವಯ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ರಾಜ್ಯದಾದ್ಯಂತ ನಡೆಯುತ್ತಿರುವ  ಹೋರಾಟ ಆರನೇ ದಿನಕ್ಕೆ ಮುಂದುವರೆದಿದೆ. ಇಂದು ಜಿಲ್ಲಾ ಮಟ್ಟದಲ್ಲಿ ನೌಕರರ ಕುಟುಂಬಸ್ಥರು ಮಕ್ಕಳೊಂದಿಗೆ ಬಂದು ತಟ್ಟೆ ಬಾರಿಸುವ ಮೂಲಕ  ಪ್ರತಿಭಟನೆ ನಡೆಸಿದರು. ದಾವಣಗೆರೆಯಲ್ಲಿಯೂ ಸಾರಿಗೆ ನೌಕರರ ಮಕ್ಕಳು ತಟ್ಟೆ ಬಾರಿಸುವ ಸರ್ಕಾರಕ್ಕೆ ವೇತನ ಹೆಚ್ಚಳಕ್ಕೆ ಆಗ್ರಹಿಸಿದರು.

ಈ ವೇಳೆ ಆರನೇ ವೇತನ ಆಯೋಗ ಅನ್ವಯ ಸಂಬಳ ಹೆಚ್ಚಿಸುವಂತೆ ಜಿಲ್ಲಾಧಿಕಾರಿ ಮುಖೇನ ಮುಖ್ಯಂತ್ರಿಗಳಿಗೆ ಮನವಿ ಸಲ್ಲಿಸಿದರು. ಸರ್ಕಾರ ಮಾತು ಕೊಟ್ಟಂತೆ ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದು ಹೊರತು ಪಡಿಸಿ ಉಳಿದ ಬೇಡಿಕೆ ಈಡೇರಿಸಬೇಕು. ಆರನೇ ವೇತನ ಆಯೋಗದ ಅನ್ವಯ ವೇತನ ಹೆಚ್ಚಳ ಮಾಡುವುದಾಗಿ ಸಾರಿಗೆ ಸಚಿವರು ಭರವಸೆ ನೀಡಿದ್ದರು. ಹೀಗಾಗಿ ಸರ್ಕಾರ ವೇತನ ಹೆಚ್ಚಿಸಬೇಕು. ನಮ್ಮ ತಂದೆ-ತಾಯಿಗೆ ಶಾಲೆ ಫೀಸ್ ಕಟ್ಟಲು ಹಣವಿಲ್ಲ. ಸರ್ಕಾರ ವೇತನ ಹೆಚ್ಚಳ ಮಾಡಿ ನಮ್ಮ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಪ್ರತಿಭಟನ ನಿರತ ಮಕ್ಕಳು ಆಗ್ರಹಿಸಿದ್ರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *