Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ ಕೆಎಸ್ ಆರ್ ಟಿಸಿ 50 ಬಸ್ ಗಳ ಕಾರ್ಯಾಚರಣೆ; 3 ಕೋಟಿಯಷ್ಟು ನಷ್ಟ  

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ ಕೆಎಸ್ ಆರ್ ಟಿಸಿ 50 ಬಸ್ ಗಳ ಕಾರ್ಯಾಚರಣೆ; 3 ಕೋಟಿಯಷ್ಟು ನಷ್ಟ  

ದಾವಣಗೆರೆ: 6ನೇ ವೇತನ ಆಯೋಗ ಅನ್ವಯ ವೇತನಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಒಕ್ಕೂಟ ರಾಜ್ಯದಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, 9 ನೇ ದಿನಕ್ಕೆ ಕಾಲಿಟ್ಟಿದೆ. ದಾವಣಗೆರೆಯಲ್ಲಿಯಲ್ಲಿ ಕೂಡ ಸಾರಿಗೆ ನೌಕರರು ಮುಷ್ಕರದಲ್ಲಿ ಭಾಗಿಯಾಗಿದ್ದಾರೆ. ಮುಷ್ಕರದ ಮಧ್ಯೆಯೂ ಇಂದು 50 ಕೆಎಸ್ ಆರ್ ಟಿಸಿ ಬಸ್ ಗಳು ಕಾರ್ಯಾಚರಣೆ ನಡೆಸಿವೆ ಎಂದು ಡಿವಿಜಿ ಸುದ್ದಿಗೆ ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ ಎನ್. ಹೆಬ್ಬಾಳ್ ತಿಳಿಸಿದ್ದಾರೆ.

ದಾವಣಗೆರೆ ಕೆಎಸ್ ಆರ್ ಟಿಸಿ ವಿಭಾಗದಲ್ಲಿ ದಾವಣಗೆರೆ 1, ದಾವಣಗೆರೆ 2 ಹಾಗೂ ಹರಿಹರ ಘಟದಲ್ಲಿ ಒಟ್ಟು 1,135 ಸಾರಿಗೆ ಸಿಬ್ಬಂದಿ ಇದ್ದು, ಇದರಲ್ಲಿ ಇಂದು ಟ್ರೈನಿ ಸೇರಿ 65 ಸಿಬ್ಬಂದಿ ಕೆಲಸಕ್ಕೆ ಹಾಜರಾಗಿದ್ದಾರೆ. 350 ಬಸ್ ಗಳಲ್ಲಿ ಇಂದು 50 ಬಸ್ ಗಳು ಕಾರ್ಯಾಚರಣೆ ನಡೆಸಿವೆ.  ಮುಷ್ಕರ 9ನೇ ದಿನಕ್ಕೆ ಕಾಲಿಟ್ಟಿದ್ದು, ದಾವಣಗೆರೆ ವಿಭಾದಿಂದ  ಒಟ್ಟು 9 ದಿನದಲ್ಲಿ 3 ಕೋಟಿಯಷ್ಟು ನಷ್ಟ ಸಂಭವಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top