ಕುರುಬ ಸಮುದಾಯದ ಮೇಲಿನ ದಬ್ಬಾಳಿಕೆ ತಪ್ಪಿಸಲು ಎಸ್ಟಿ ಮೀಸಲಾತಿ ಹೋರಾಟ : ಕಾಗಿನೆಲೆ ಶ್ರೀ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕುರುಬರ ಸಮಾಜದ ಮೇಲಿನ ದಬ್ಬಾಳಿಕೆ, ಸಮುದಾಯದ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಪ್ಪಿಸಲು ಎಸ್ ಟಿ ಮೀಸಲಾತಿ ಹೋರಾಟ ನಡೆಸಲಾಗುತ್ತಿದೆ ಎಂದು ಕಾಗಿನೆಲೆಯ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದರು.

kuruba sammelana

ನಗರದ ಬೀರಲಿಂಗೇಶ್ವರ ಮೈದಾನದಲ್ಲಿ ಆಯೋಜಿಸಿದ್ದ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಹೋರಾಟ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು  ಹೆಚ್. ಎಂ, ರೇವಣ್ಣ ಹಿರೋ ಮಾಡುವುದಕ್ಕೆ ಅಲ್ಲ.  ಈ  ಹೋರಾಟ ಕುರುಬರನ್ನು ಹಿರೋ ಮಾಡುವುದಕ್ಕೆ ಎಂದು ಕರೆ ನೀಡಿದರು.

ಎಸ್ಟಿ ಮೀಸಲಾತಿ ಹೋರಾಟ  ಯೋಚನೆ ಮಾಡಿಯೇ ಕೈ ಹಾಕಿದ್ದೇವೆ. ನಾವು ಮೊದಲು  ಹೋಗಿದ್ದು ಸಿದ್ದರಾಮಯ್ಯ ಅವರ ಮನೆಗೆ ಎಂದು ಕಾಗಿನೆಲೆ ಶ್ರೀ ನಿರಂಜನಾನಂದ ಪುರಿ ಪುನರುಚ್ಚಾರಿಸಿದರು. ಸಿದ್ದರಾಮಯ್ಯ ‌ಒಪ್ಪಿಕೊಂಡ ಮೇಲೆ ನಾವು ಈಶ್ವರಪ್ಪನ ಮನೆಗೆ ಹೋಗಿದದ್ದು, ಇಲದು ಯಾವ ಪಕ್ಷದ ಪರವಾಗಿ ಅಥವಾ ವಿರುದ್ಧವಾಗಿ ಅಲ್ಲ ಎಂದರು.

kuruba sammelana 5

ನಾನು 300 ಕಿ ಮೀ ನಡೆಯಲು ಸಿದ್ಧನಿದ್ದು, ಈಗಾಗಲೇ ತಯಾರಿ ನಡೆಸಿದ್ದೇನೆ .ನೀವು ನನ್ನ ಜೊತೆ ಹೆಜ್ಜೆ ಹಾಕಬೇಕು ಎಂದು ಭಕ್ತರಿಗೆ ಕರೆ ನೀಡಿದರು.ಪಾದಯಾತ್ರೆಯಲ್ಲಿ ಕಂಬಳಿಯನ್ನು  ಕಡ್ಡಾಯ ವಾಗಿ ಹಾಕಿಕೊಂಡು ಬರಬೇಕು. ಕಂಬಳಿ ಬುಡಕಟ್ಟು ಸಂಸ್ಕೃತಿಯನ್ನು ಬಿಂಬಿಸಲಿದೆ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *