Connect with us

Dvgsuddi Kannada | online news portal | Kannada news online

ಕೃಷಿ ಹೊಂಡ, ಚೆಕ್‌ಡ್ಯಾಂ, ಕಂದಕ, ಬದು ನಿರ್ಮಾಣ ಮೂಲಕ ಮಳೆ ನೀರು ಸಂಗ್ರಹಿಸಿ; ಸಂದಿಗ್ದ ಪರಿಸ್ಥಿತಿಯಲ್ಲಿ ಬಳಸಿಕೊಳ್ಳಿ: ಬೇಸಾಯ ತಜ್ಞ ಮಲ್ಲಿಕಾರ್ಜುನ

kvk farmer meeting

ದಾವಣಗೆರೆ

ಕೃಷಿ ಹೊಂಡ, ಚೆಕ್‌ಡ್ಯಾಂ, ಕಂದಕ, ಬದು ನಿರ್ಮಾಣ ಮೂಲಕ ಮಳೆ ನೀರು ಸಂಗ್ರಹಿಸಿ; ಸಂದಿಗ್ದ ಪರಿಸ್ಥಿತಿಯಲ್ಲಿ ಬಳಸಿಕೊಳ್ಳಿ: ಬೇಸಾಯ ತಜ್ಞ ಮಲ್ಲಿಕಾರ್ಜುನ

ದಾವಣಗೆರೆ: ನೀರಿನ ಸಂರಕ್ಷಣಾ ತಂತ್ರಜ್ಞಾನಗಳಾದ ಕಂದಕ ಮತ್ತು ಬದು, ಚೆಕ್‌ಡ್ಯಾಂ ಮತ್ತು ಕೃಷಿ ಹೊಂಡಗಳ ನಿರ್ಮಾಣದಿಂದಾಗಿ ಬೆಳೆಗಳ ಸಂದಿಗ್ದ ಪರಿಸ್ಥಿತಿಯಲ್ಲಿ ನೀರು ನೀಡಲು ಅನುಕೂಲವಾಗಲಿದೆ. ಜತೆಗೆ ಅಂತರ್ಜಲ ವೃದ್ಧಿಯೂ ಆಗಲಿದೆ ಎಂದು ಬೇಸಾಯ ತಜ್ಞ ಬಿ.ಓ.  ಮಲ್ಲಿಕಾರ್ಜುನ ಹೇಳಿದರು.

ನಗರದ ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಿದ್ದ ಹವಾಮಾನ ವೈಪರೀತ್ಯಕ್ಕೆ ಚೇತರಿಕೆಯುಕ್ತ ಕೃಷಿ ಬಗ್ಗೆ ರೈತರ-ವಿಜ್ಞಾನಿಗಳ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಳೆದ 10 ವರ್ಷಗಳಿಂದ ಅನುಷ್ಟಾನಗೊಂಡ ಹವಾಮಾನ ಚೇತರಿಕೆಯುಕ್ತ ಕೃಷಿ ತಂತ್ರಜ್ಞಾನಗಳ ಯೋಜನೆಯು ಸಿದ್ದನೂರು, ಅಗಸನಕಟ್ಟೆ ಮತ್ತು ಪವಾಡರಂಗವ್ವನಹಳ್ಳಿ ಗ್ರಾಮಗಳಲ್ಲಿ ರೈತರನ್ನು ಜಾಗೃತಿಗೊಳಿಸಿದ್ದಲ್ಲದೆ, ಚೇತರಿಕೆಯುಕ್ತ ತಂತ್ರಜ್ಞಾನಗಳಾದ ಅದರಲ್ಲೂ ಬರನಿರೋಧಕ ತಳಿಗಳನ್ನು ಅಳವಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಕೆವಿಕೆ ಮುಖ್ಯಸ್ಥ ಡಾ. ದೇವರಾಜ ಟಿ.ಎನ್. ರವರು ಮಾತನಾಡಿ ಪ್ರಪಂಚದಲ್ಲಾಗುತ್ತಿರುವ ಹವಾಮಾನ ಬದಲಾವಣೆ ಮುಂಬರುವ ದಿನಗಳಲ್ಲಿ ನಮ್ಮ ಬೆಳೆಗಳ ಇಳುವರಿಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದ್ದು, ಅಕಾಲಿಕ ಮಳೆ ಇದಕ್ಕೆ ಕನ್ನಡಿ ಹಿಡಿದಹಾಗಿದೆ. ಇದಕ್ಕೆ ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕೆಂದು ಕರೆಕೊಟ್ಟರು. ಈ ಸಂದರ್ಭದಲ್ಲಿ ಬರನಿರೋಧಕ 35  ತಳಿಗಳನ್ನು ಬಿಡುಗಡೆ ಮಾಡಿ ದೇಶದ ರೈತರನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದನ್ನು ನೇರ ಪ್ರಸಾರ ಮಾಡಲಾಯಿತು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top