Connect with us

Dvgsuddi Kannada | online news portal | Kannada news online

ದಾವಣಗೆರೆ: ಮೆಕ್ಕೆಜೋಳ ಹೊಲದಲ್ಲಿ ಅವಿತು ಕುಳಿತಿದ್ದ ಚಿರತೆ; ಕಲ್ಲಿನಿಂದ ಹೊಡೆದು ಹಿಡಿದ ಗ್ರಾಮಸ್ಥರು; ನೆಮ್ಮದಿ ನಿಟ್ಟುಸಿರು ಬಿಟ್ಟ ಜನ

ಹೊನ್ನಾಳಿ

ದಾವಣಗೆರೆ: ಮೆಕ್ಕೆಜೋಳ ಹೊಲದಲ್ಲಿ ಅವಿತು ಕುಳಿತಿದ್ದ ಚಿರತೆ; ಕಲ್ಲಿನಿಂದ ಹೊಡೆದು ಹಿಡಿದ ಗ್ರಾಮಸ್ಥರು; ನೆಮ್ಮದಿ ನಿಟ್ಟುಸಿರು ಬಿಟ್ಟ ಜನ

ದಾವಣಗೆರೆ: ಮೆಕ್ಕೆಜೋಳ ಹೊಲದಲ್ಲಿ ಅವಿತು ಕುಳಿತಿದ್ದ ಚಿರತೆಯನ್ನು ಗ್ರಾಮಸ್ಥರು ಕಲ್ಲಿನಿಂದ ಹೊಡೆದು ಹಿಡಿದ್ದಾರೆ. ಇದರಿಂದ ಆತಂಕದಲ್ಲಿದ್ದ ಜನರು ನೆಮ್ಮದಿ ನಿಟ್ಟುಸಿರು ಬಿಟ್ಟಿದ್ದಾರೆ.

ಜಿಲ್ಲೆಯ ಹೊನ್ನಾಳಿ ತಾಲೂಕಿನ ಕೋಟೆ ಮಲ್ಲೂರು ಗ್ರಾಮದಲ್ಲಿ ಭಯ ಹುಟ್ಟಿಸಿದ ಚಿರತೆಯನ್ನು ಗ್ರಾಮಸ್ಥರೇ ಸೆರೆಹಿಡಿದಿದ್ದಾರೆ. ಕೋಟೆ ಮಲ್ಲೂರು ಗ್ರಾಮದಲ್ಲಿ ಮೂರ್ನಾಲ್ಕು ದಿನಗಳಿಂದ ಚಿರತೆಯೊಂದು ಭಯ ಹುಟ್ಟಿಸಿತ್ತು. ನಾಲ್ವರ ಮೇಲೆ ದಾಳಿ ಮಾಡಿತ್ತು. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು.

ಅರಣ್ಯಾಧಿಕಾರಿಗಳನ್ನು ನಂಬಿಕೊಂಡರೆ ಚಿರತೆ ಸೆರೆಹಿಡಿಯುವುದಿಲ್ಲ ಎಂದುಕೊಂಡು, ತಾವೇ ಕೈಯಲ್ಲಿ ದೊಣ್ಣೆ ಹಿಡಿದು ಚಿರತೆ ಸೆರೆ ಹಿಡಿದಿದ್ದಾರೆ. ಮೆಕ್ಕೆಜೋಳ ಹೊಲದಲ್ಲಿ ಚಿರತೆಯು ಅವಿತು ಕುಳಿತಿದೆ ಎಂದು ವಿಚಾರ ತಿಳಿಯುತ್ತಿದ್ದಂತೆ, ದೊಣ್ಣೆ ಹಿಡಿದು ನುಗ್ಗಿದ್ದರು. ಇವರಿಂದ ತಪ್ಪಿಸಿಕೊಂಡು ಓಡಲು ಶುರು ಮಾಡಿದ ಚಿರತೆಗೆ ಕಲ್ಲುಗಳಿಂದ ಹೊಡೆದಿದ್ದಾರೆ. ನಂತರ ಚಿರತೆಯನ್ನು ಹಿಡಿದು ಕಾಲು ಕಟ್ಟಿ, ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಚಿರತೆಯನ್ನು ರಕ್ಷಣೆ ಮಾಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹೊನ್ನಾಳಿ

To Top