Connect with us

Dvgsuddi Kannada | online news portal | Kannada news online

ದಾವಣಗೆರೆ: ಅವಧಿ ಮೀರಿದ 8.71 ಲಕ್ಷ ಮೌಲ್ಯದ ಮದ್ಯ ನಾಶ

liquer

ದಾವಣಗೆರೆ

ದಾವಣಗೆರೆ: ಅವಧಿ ಮೀರಿದ 8.71 ಲಕ್ಷ ಮೌಲ್ಯದ ಮದ್ಯ ನಾಶ

ದಾವಣಗೆರೆ: ಮಾರಾಟವಾಗದೇ ಬಾಕಿ ಉಳಿದಿದ್ದ ಅವಧಿ ಮೀರಿದ ಹಾಗೂ ಮಾನವನ ಸೇವನೆಗೆ ಯೋಗ್ಯವಲ್ಲದ ವಿವಿಧ ಮಾದರಿಯ ಹಾಗೂ ವಿವಿಧ ಪ್ರಮಾಣದ 38 ಪೆಟ್ಟಿಗೆ 57 ಬಾಟಲ್ ನಲ್ಲಿನ 353.000 ಲೀ. ಬಿಯರ್ ಮತ್ತು 156 ಪೆಟ್ಟಿಗೆ 19 ಬಾಟಲ್ ನಲ್ಲಿನ 1296 ಲೀ. ಬಿಯರ್ ಅನ್ನು ದಾವಣಗೆರೆ ಜಿಲ್ಲೆ ಹರಿಹರ ಕೆಎಸ್‍ಬಿಸಿಎಲ್ ಲಿಕ್ಕರ್ ಡಿಪೋದಲ್ಲಿ ನಾಶ ಮಾಡಲಾಯಿತು.

ಅಬಕಾರಿ ಉಪ ಆಯುಕ್ತ ಬಿ.ಶಿವಪ್ರಸಾದ್ ಹಾಗೂ ಅಬಕಾರಿ ಉಪ ಅಧೀಕ್ಷಕ ಕೆ.ಎಲ್.ನಾಗರಾಜ್ ಇವರುಗಳ ನೇತೃತ್ವದಲ್ಲಿ ಡಿಪೋ ಆವರಣದಲ್ಲಿ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ನಿಯಮಾನುಸಾರ ನಾಶಪಡಿಸಲಾಯಿತು. ಈ ವೇಳೆ ದಾವಣಗೆರೆ ವಲಯ ನಂ.01 ಮತ್ತು 02ರ ಅಬಕಾರಿ ನಿರೀಕ್ಷಕರು, ಕೆ.ಎಸ್.ಬಿ.ಸಿ.ಎಲ್ ಡಿಪೋ ಅಬಕಾರಿ ನಿರೀಕ್ಷಕರು ಮತ್ತು ವ್ಯವಸ್ಥಾಪಕರು, ಸಿಬ್ಬಂದಿಗಳು ಹಾಗೂ ಪಂಚರ ಸಮಕ್ಷಮ ನಿಯಮಾನುಸಾರ ನಾಶಪಡಿಸಲಾಯಿತು. ಬಿಯರ್ ದಾಸ್ತಾನಿನ ಅಂದಾಜು ಮೌಲ್ಯ 8,71,550 ರೂ. ಗಳಾಗಿರುತ್ತದೆ ಎಂದು ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ ಬಿ.ಶಿವಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top