ಡಿವಿಜಿ ಸುದ್ದಿ, ದಾವಣಗೆರೆ: ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ಮತ್ತು ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆ ನೀಡಿರುವ ಪ್ರತಿಭಟನೆಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಬೆಂಬಲ ನೀಡಿದೆ.
ಜಿಲ್ಲಾಧ್ಯಕ್ಷರಾದ ಎಚ್.ಬಿ. ಮಂಜಪ್ಪನವರ ನೇತೃತ್ವದಲ್ಲಿ ಪ್ರತಿಭಟನಾ ಸ್ಥಳಕ್ಕೆ ತೆರಳಿದ ನೂರಾರು ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ದೇಶದ ಬೆನ್ನೇಲುಬಾಗಿರುವ ರೈತ ಮತ್ತು ಕಾರ್ಮಿಕರಿಗೆ ಅನ್ಯಾಯವಾಗುವ ಕೃಷಿ ತಿದ್ದುಪಡಿ ಮಾಡಲು ಹೊರಟಿರುವುದು ಖಂಡನೀಯ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಡಾ. ವೈ.ರಾಮಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಲೀಗಲ್ಸೆಲ್ ಅಧ್ಯಕ್ಷ ಪ್ರಕಾಶ್ ಪಾಟೀಲ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್, ಸದಸ್ಯ ಪಾಮೇನಹಳ್ಳಿ ನಾಗರಾಜ್, ಚಮನ್ ಸಾಬ್, ಇಟ್ಟಿಗುಡಿ ಮಂಜುನಾಥ್, ಎಸ್.ಮಲ್ಲಿಕಾರ್ಜುನ್, ಹರೀಶ್ ಕೆ.ಎಲ್. ಬಸಾಪುರ, ಸುಷ್ಮಾ ಪಾಟೀಲ್, ಕವಿತಾ ಚಂದ್ರಶೇಖರ್, ಸುನಿತಾ ಭೀಮಣ್ಣ, ರಾಧಾಬಾಯಿ, ಜಯಶ್ರೀ, ಇಂದ್ರಮ್ಮ, ದ್ರಾಕ್ಷಾಯಣಮ್ಮ, ರಾಜೇಶ್ವರಿ, ಶುಭಮಂಗಳ, ಮಂಗಳಮ್ಮ, ಜಿ.ರಾಕೇಶ್ ಮತ್ತಿತರರು ಉಪಸ್ಥಿತರಿದ್ದರು.



