ದಾವಣಗೆರೆ:1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು 50 ಸಾವಿರ ಲಂಚ ಪಡೆಯುವಾಗ ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್ಐ ಈರಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
- ಲೋಕಾಯುಕ್ತ ಬಲೆಗೆ ಬಿದ್ದ ಎಎಸ್ಐ ಈರಣ್ಣ
- ಕೆಟಿಜೆ ನಗರ ಪೊಲೀಸ್ ಠಾಣೆಯ ಎಎಸ್ ಐ
- ದೋಷಾರೋಪಪಟ್ಟಿಯಿಂದ ಇಬ್ಬರ ಹೆಸರು ಕೈಬಿಡಲು ಲಂಚಕ್ಕೆ ಬೇಡಿಕೆ
- 1 ಲಕ್ಷ ಲಂಚಕ್ಕೆ ಬೇಡಿಕೆ, 50 ಸಾವಿರ ಲಂಚ ಪಡೆಯುವಾಗ ದಾಳಿ
ಗಲಾಟೆ ಪ್ರಕರಣಕ್ಕೆ ಸಬಂಧಿಸಿದಂತೆ ದೋಷಾರೋಪಪಟ್ಟಿಯಿಂದ ಇಬ್ಬರ ಹೆಸರುಗಳನ್ನು ಕೈಬಿಡಲು ಆರೋಪಿಯಿಂದ 1 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಮೊದಲ ಕಂತಿನ 50 ಸಾವಿರ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು,ಎಎಸ್ಐ ಈರಣ್ಣ ಅವರನ್ನು ವಶಕ್ಕೆ ಪಡೆಯಲಾಗಿದೆ.
ಗಲಾಟೆಯೊಂದರ ಹಿನ್ನೆಲೆ ಮಣಿಕಂಠ ಆಚಾರ್ಯ ಅವರ ತಾಯಿ ಭಾಗ್ಯಮ್ಮ, ಪತ್ನಿ ಅರ್ಚನಾ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಎಎಸ್ಐ ಈರಣ್ಣ, ಭಾಗ್ಯಮ್ಮ ಮತ್ತು ಅರ್ಚನಾ ಅವರ ಹೆಸರನ್ನು ದೋಷಾರೋಪಪಟ್ಟಿಯಿಂದ ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರ.
ಈ ಕುರಿತು ಮಣಿಕಂಠ ಆಚಾರ್ಯ ಅವರು ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡಿ, ದೂರು ನೀಡಿದ್ದರು. ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಸಿ.ಮಧುಸೂದನ್, ಪ್ರಭು ಬಸೂರಿನ ಹಾಗೂ ಪಿ.ಸರಳ ನೇತೃತ್ವದಲ್ಲಿ ದಾಳಿ ನಡೆದಿದೆ.



