Connect with us

Dvgsuddi Kannada | online news portal | Kannada news online

ದಾವಣಗೆರೆ: 5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ ಸ್ಟೇಬಲ್

IMG 20240204 065407

ದಾವಣಗೆರೆ

ದಾವಣಗೆರೆ: 5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ ಸ್ಟೇಬಲ್

ದಾವಣಗೆರೆ: ಅಪಘಾತವಾಗಿದ್ದ ಬೈಕ್ ಬಿಡಲು 6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, 5 ಸಾವಿರ ಲಂಚ ಪಡೆಯುವಾಗ ಮಾಯಕೊಂಡ ಠಾಣೆ ಹೆಡ್ ಕಾನ್ ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.

ಜಿಲ್ಲೆಯ ಮಾಯಕೊಂಡ ಪೊಲೀಸ್ ಠಾಣೆ ಮುಖ್ಯಪೇದೆ ಹೊನ್ನೂರಸ್ವಾಮಿ ಲೋಕಾಯುಕ್ತಕ್ಕೆ ಬಲೆಗೆ ಬುದ್ದವರು. ಜ.31ರಂದು ಅಪಘಾತಕ್ಕೀಡಾಗಿದ್ದ ಬೈಕ್ ಬಿಟ್ಟುಕೊಡಲು ಹೊನ್ನೂರು ಗೊಲ್ಲರಹಟ್ಟಿ ಗ್ರಾಮದ ಚಂದ್ರಪ್ಪ ಎಂಬುವರಿಗೆ ಹೆಡ್ ಕಾನ್ಸಟೇಬಲ್ ಹೊನ್ನೂರುಸ್ವಾಮಿ 6,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ 1,000 ರೂ. ಹಣವನ್ನು ಮುಂಗಡವಾಗಿ ಪಡೆದುಕೊಂಡು, ಉಳಿದ 5,000 ರೂ. ಲಂಚದ ಹಣವನ್ನು ಶನಿವಾರ ತಂದುಕೊಡುವಂತೆ ತಿಳಿಸಿದ್ದರು.

ಮಾಯಕೊಂಡ ಪೊಲೀಸ್ ಠಾಣೆ ಹೊರಾವರಣದಲ್ಲಿ ಶನಿವಾರ ಚಂದ್ರಪ್ಪ ಬಳಿ 5,000 ರೂ. ಲಂಚದ ಹಣ ಪಡೆಯುವಾಗ ಹೊನ್ನೂರುಸ್ವಾಮಿ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ಆರೋಪಿ ಹೊನ್ನೂರುಸ್ವಾಮಿ ಬಂಧಿಸಲಾಗಿದೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಪ್ರಭು ಬ.ಸೂರಿನ, ಸಿ.ಮಧುಸೂದನ್, ಹೆಚ್.ಎಸ್.ರಾಷ್ಟ್ರಪತಿ ನೇತೃತ್ವದ ಸಿಬ್ಬಂದಿ ತಂಡ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆದಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top