Connect with us

Dvgsuddi Kannada | online news portal | Kannada news online

ದಾವಣಗೆರೆ: ಬಿಲ್ ಮಂಜೂರು ಮಾಡಲು 10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್ಸ್..!!

lokayukth karnataka

ಚನ್ನಗಿರಿ

ದಾವಣಗೆರೆ: ಬಿಲ್ ಮಂಜೂರು ಮಾಡಲು 10 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯರ್ಸ್..!!

ದಾವಣಗೆರೆ: ಬಿಲ್ ಮಂಜೂರು ಮಾಡಲು‌ ಗುತ್ತಿಗೆದಾರನಿಂದ 10 ಸಾವಿರ ಲಂಚ ಪಡೆಯುವಾಗ ಇಬ್ಬರು ಇಂಜಿನಿಯರ್ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ.

ಗ್ರಾಪಂ ಮೇಲ್ಚಾವಣಿ ನಿರ್ಮಾಣ ಕಾಮಗಾರಿ ಹಾಗೂ ಸರ್ಕಾರಿ ಶಾಲೆ ಶೌಚಾಲಯದ ಕಾಮಗಾರಿ ಮಾಡಿದ್ದ ಸಿವಿಲ್ ಗುತ್ತಿಗೆದಾರನಿಗೆ ಬಿಲ್ ಮಂಜೂರು ಮಾಡಲು 20,800 ರು. ಲಂಚ ಕೇಳಿ, 10 ಸಾವಿರ ರು. ಲಂಚದ ಹಣ ಪಡೆಯುತ್ತಿದ್ದ ವೇಳೆ ಚನ್ನಗಿರಿ ಉಪ ವಿಭಾಗದ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಕಿರಿಯ ಅಭಿಯಂತರ ಹಾಗೂ ಸಹಾಯಕ ಕಾರ್ಯ ಪಾಲಕ ಅಭಿಯಂತರ ಲೋಕಾಯುಕ್ತರ ಹಣ ಸಮೇತ ಸಿಕ್ಕಿ ಬಿದ್ದಿದ್ದಾರೆ.

ಚನ್ನಗಿರಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಕಿರಿಯ ಅಭಿಯಂತರ ಬಿ.ಬಸವರಾಜ ಹಾಗೂ ಸಹಾಯಕ ಕಾರ್ಯ ಪಾಲಕ ಅಭಿಯಂತರ ಕೆ.ಎಸ್.ಸತೀಶ ನಾಯ್ಕ ಲೋಕಾಯುಕ್ತ ಗಾಳಕ್ಕೆ ಸಿಕ್ಕಿ ಬಿದ್ದ ಆರೋಪಿಗಳು. ಶಿವಮೊಗ್ಗ ಜಿಲ್ಲೆ ಹೊಸನಗರ ಪಟ್ಟಣದ ಪೊಲೀಸ್‌ ಕ್ವಾಟ್ರರ್ಸ್‌ನ ಶರಾವತಿ ಬ್ಲಾಕ್‌ನ ಸಿವಿಲ್ ಗುತ್ತಿಗೆದಾರ (ಕ್ಲಾಸ್-2) ಎಸ್.ಸುನಿಲ್‌(32 ವರ್ಷ) ನೀಡಿದ್ದ ದೂರಿನ ಮೇರೆಗೆ ಲಂಚ ಪಡೆಯುತ್ತಿದ್ದ ವೇಳೆ ಬಸವರಾಜ ಹಾಗೂ ಸತೀಶ ನಾಯ್ಕನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಹಾರೋನಹಳ್ಳಿ ಗ್ರಾಪಂ ಮೇಲ್ಚಾವಣಿ ನಿರ್ಮಾಣದ ಕಾಮಗಾರಿ, ಹೊಸಹಳ್ಳಿ ಸರ್ಕಾರಿ ಶಾಲೆ ಶೌಚಾಲಯ ನಿರ್ಮಿಸಲು ಕರ್ನಾಟಕ ಪಬ್ಲಿಕ್ ಪ್ರರ್ಕ್ಯೂಮೆಂಟ್‌ ಪೋರ್ಟ್‌ನಿಂದ ಟೆಂಡರ್ ಕರೆದಿದ್ದು, ಕಾಮಗಾರಿ ನಿರ್ವಹಿಸಲಾಗಿದೆ. ಗ್ರಾಪಂ ಕಾಮಗಾರಿ ಪೂರ್ಣಗೊಳಿಸಿದ್ದ ಗುತ್ತಿಗೆದಾರ ಸುನಿಲ್‌ ಹೊಸಹಳ್ಳಿ ಸರ್ಕಾರಿ ಶಾಲೆಯ ಶೌಚಲಯ ನಿರ್ಮಾಣದ ಕಾಮಗಾರಿಯ ಬಿಲ್‌ನನ್ನು ಪಾರ್ಟ್ ಬಿಲ್ ಮಾಡಿ, ಉಳಿದ ಬಿಲ್‌ ಮಂಡೂರು ಮಾಡಲು ₹20,800 ಲಂಚಕ್ಕೆ ಕಿರಿಯ ಅಭಿಯಂತರ ಬಿ.ಬಸವರಾಜ, ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಎಸ್.ಸತೀಶ ನಾಯ್ಕ ಬೇಡಿಕೆ ಇಟ್ಟಿದ್ದರು.

ಲೋಕಾಯುಕ್ತ ಅಧೀಕ್ಷಕ ಎಂ.ಎಸ್.ಕೌಲಾಪುರೆ ನೇತೃತ್ವದಲ್ಲಿ ಡಿವೈಎಸ್ಪಿ ಕಲಾವತಿ, ನಿರೀಕ್ಷಕರಾದ ಸಿ.ಮಧುಸೂದನ ಮಾರ್ಗದರ್ಶನದಲ್ಲಿ ಸಿಬ್ಬಂದಿಯಾದ ಆಂಜನೇಯ, ಸುಂದರೇಶ, ಆಶಾ, ಜಂಷಿದಾ ಬೇಗಂ, ಮಲ್ಲಿಕಾರ್ಜುನ, ಲಿಂಗೇಶ, ಮಂಜುನಾಥ, ಗಿರೀಶ, ಎಸ್.ಎನ್.ಕಡಕೋಳ, ಆನಂದ ತಳಕಲ್‌, ರಫೀ ಲಕ್ಷ್ಮೇಶ್ವರ, ಚಾಲಕರಾದ ವಿನಾಯಕ, ಮೋಹನ, ಬಸವರಾಜ, ಆನಂದಶೆಟ್ರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಆರೋಪಿಗಳನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

ದಾವಣಗೆರೆ

Advertisement
Advertisement Enter ad code here

Title

To Top