ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವಲಯ-1 ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಇ-ಸ್ವತ್ತು ಸೇರಿದಂತೆ ಅನೇಕ ಸೇವೆಗಳಿಗೆ ಅಧಿಕ ಹಣ ಸಂಗ್ರಹ ಮಾಡುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಪಾಲಿಕೆ ಸಿಬ್ಬಂದಿಗಳ ಸಂಬಳದ ವ್ಯವಹಾರಗಳ ಬಗ್ಗೆ ವಿಚಾರಿಸಿದ್ದಾರೆ.
ದಾವಣಗೆರೆಯ ರಾಜೀವ್ ಗಾಂಧಿ ಬಡಾವಣೆಯಲ್ಲಿರುವ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಸಿಬ್ಬಂದಿಗಳ ಸಂಬಳ , ಇಎಂಐ ಎಷ್ಟು? ಸಂಬಳಕ್ಕಿಂತ ವಹಿವಾಟು ಹೆಚ್ಚಿದೆ ಎಂದು ತರಾಟೆ ತೆಗೆದುಕೊಂಡಿದ್ದಾರೆ. ಪಾಲಿಕೆಯಲ್ಲಿ ಕೆಲಸ ಮಾಡುವ ಪ್ರತಿಯೊಬ್ಬ ಸಿಬ್ಬಂದಿಯಿಂದಲೂ ಮಾಹಿತಿ ಕಲೆ ಹಾಕಿದ್ದಾರೆ.
ಸಿಬ್ಬಂದಿಯ ಬ್ಯಾಂಕ್ ವಹಿವಾಟಿನ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.ಎಂಟಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.



