ದಾವಣಗೆರೆ; ಏಕ ಕಾಲದಲ್ಲಿ ನಿವೃತ್ತ ಡಿಎಫ್​ಓ, ತಹಶೀಲ್ದಾರ್ ಮನೆ, ಇತರಡೆ ಲೋಕಾಯುಕ್ತ ದಾಳಿ; ಮಹತ್ವದ ದಾಖಲೆ ವಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ಇತ್ತೀಚೆಗೆ ಬಿಜೆಪಿ ಸೇರ್ಪಡೆಗೊಂಡಿದ್ದ ನಿವೃತ್ತ ಐಎಫ್‌ಎಸ್ ಅಧಿಕಾರಿ ಹಾಗೂ ತಹಶೀಲ್ದಾರ್  ಮನೆ ಹಾಗೂ ಇತರಡೆ ಏಕ‌ಕಾಲದಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. ಶಿವಮೊಗ್ಗ ವನ್ಯಜೀವಿ ವಿಭಾಗದ ನಿವೃತ್ತ ಡಿಎಫ್​ಓ ಐ‌.ಎಂ.ನಾಗರಾಜ್ ದಾವಣಗೆರೆ ಮತ್ತು ಶಿವಮೊಗ್ಗದ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

2022ರ ಡಿಸಂಬರ್ ನಲ್ಲಿ ನಾಗರಾಜದ ನಿವೃತ್ತರಾಗಿದ್ದರು. ಇವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ದೂರು ಕೇಳಿ ಬಂದ ಕಾರಣ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆ, ಲಗಾನ್ ಮಂದಿರದ ಹಿಂಭಾಗದ ವಿಸ್ಮಯ ಮನೆ ಮೇಲೆ ದಾಳಿ ನಡೆಸಲಾಗಿದೆ. ಅಲ್ಲದೆ ಸಾಗರ ರಸ್ತೆಯ ಪೆಟ್ರೋಲ್ ಬಂಕ್‌ ಸೇ‌ರಿದಂತೆ ದಾವಣಗೆರೆ ಜಿಲ್ಲೆ ಹೂನ್ನಾಳಿಯಲ್ಲೂ ಸಹ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಹಲವು ಮಹತ್ವ ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ.

ಇದಲ್ಲದೆ ಮತ್ತೊಂದು ಪ್ರಕರಣದಲ್ಲಿ ಈ ಹಿಂದೆ ಶಿವಮೊಗ್ಗದ ತಹಶೀಲ್ದಾರ್ ಆಗಿದ್ದ‌, ಹಾಲಿ ಚಿತ್ರದುರ್ಗ ಜಿಲ್ಲೆ ಹೊಳಲ್ಕರೆ ತಹಶೀಲ್ದಾರ್ ಆಗಿರುವ ನಾಗರಾಜ್ ಅವರ ಮನೆ ಮೇಲೆಯೂ ಲೋಕಾಯುಕ್ತ ದಾಳಿಯಾಗಿದೆ. ಅವರ ಸಂಬಂಧಿಕರ ಮನೆ ಶಿಕಾರಿಪುರದ ಚನ್ನಕೇಶವ ನಗರದಲ್ಲಿ ಈ ದಾಳಿ ನಡೆಸಲಾಗಿದೆ. ಒಂದೆಡೆ ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಸಂತ ಕುಮಾರ ನೇತೃತ್ವದಲ್ಲಿ 7 ಕಡೆ ದಾಳಿ ನಡೆದರೆ, ಮತ್ತೊಂದೆಡೆ ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತ್ರತ್ವದಲ್ಲಿ 20ಕ್ಕೂ ಹೆಚ್ಚು ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆದಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *