Connect with us

Dvgsuddi Kannada | online news portal | Kannada news online

ದಾವಣಗೆರೆ: 10 ಸಾವಿರ ಲಂಚ ಪಡೆಯುವಾಗ ಲೋಕಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯ್ತಿ ಪಿಡಿಓ, ಡಾಟಾ ಎಂಟ್ರಿ ಆಪರೇಟರ್…!

images 20 1

ದಾವಣಗೆರೆ

ದಾವಣಗೆರೆ: 10 ಸಾವಿರ ಲಂಚ ಪಡೆಯುವಾಗ ಲೋಕಯುಕ್ತ ಬಲೆಗೆ ಬಿದ್ದ ಗ್ರಾಮ ಪಂಚಾಯ್ತಿ ಪಿಡಿಓ, ಡಾಟಾ ಎಂಟ್ರಿ ಆಪರೇಟರ್…!

ದಾವಣಗೆರೆ: ಇ-ಸ್ವತ್ತು ಮಾಡಿಕೊಡಲುಸಾವಿರ ಲಂಚ ಸ್ವೀಕರಿಸುವಾಗ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ಡಾಟಾ ಎಂಟ್ರಿ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಜಗಳೂರು ತಾಲೂಕಿನ ಕೆಚ್ಚೇನಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಸ್.ಎಂ. ನಂದಿಲಿಂಗೇಶ ಸಾರಂಗ ಮಠ (35) ಮತ್ತು ಡಾಟಾಎಂಟ್ರಿ ಆಪರೇಟರ್ ಅಜ್ಜಯ್ಯ (32) ಲೋಕಾಯುಕ್ತರ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ದಾವಣಗೆರೆ ನಿಟುವಳ್ಳಿಯಲ್ಲಿ ವಾಸವಿರುವ ಮೂಲತಃ ಜಗಳೂರು ತಾಲೂಕು ಕೆಳಗೋಟೆ ಗ್ರಾಮದ ಬಸವನಗೌಡ ಎಂಬುವರು ತಮ್ಮ ಗ್ರಾಮದಲ್ಲಿನ ಮನೆಯ ಖಾತೆಗೆ ಇ-ಸ್ವತ್ತು ಮಾಡಿಸಲು ಕೆಚ್ಚೇನಹಳ್ಳಿ ಗ್ರಾಮ ಪಂಚಾಯತ್‌ ಗೆ ಅರ್ಜಿ ಸಲ್ಲಿಸಿದ್ದರು. ಇ-ಖಾತೆ ಮಾಡಿಕೊಡಲು ಪಿಡಿಒ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು (ಅ.27) ಹಣ ಪಡೆಯುವಾಗ ಈ ದಾಳಿ ನಡೆದಿದೆ.

ಅ.21ರಂದು ಬಸವನ ಗೌಡ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿ ಮೇರೆಗೆ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪೂರೆ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಕಚೇರಿಯಲ್ಲೇ ಬಸವನಗೌಡ ಅವರಿಂದ 10 ಸಾವಿರ ರೂಪಾಯಿ ಪಡೆಯುತ್ತಿದ್ದ ಎಸ್.ಎಂ. ನಂದಿಲಿಂಗೇಶ ಸಾರಂಗಮಠ ಮತ್ತು ಅಜ್ಜಯ್ಯನನ್ನು ಬಂಧಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top