Connect with us

Dvgsuddi Kannada | online news portal | Kannada news online

ದಾವಣಗೆರೆ: 40 ಸಾವಿರ ಲಂಚಕ್ಕೆ ಬೇಡಿಕೆ; 5 ಸಾವಿರ ಲಂಚ ಸ್ವೀಕರಿಸುವಾಗ ಲೋಕಯುಕ್ತ ಬಲೆಗೆ‌ ಬಿದ್ದ ಸರ್ವೆ ಇಲಾಖೆ ಅಧಿಕಾರಿ….!

images 20

ದಾವಣಗೆರೆ

ದಾವಣಗೆರೆ: 40 ಸಾವಿರ ಲಂಚಕ್ಕೆ ಬೇಡಿಕೆ; 5 ಸಾವಿರ ಲಂಚ ಸ್ವೀಕರಿಸುವಾಗ ಲೋಕಯುಕ್ತ ಬಲೆಗೆ‌ ಬಿದ್ದ ಸರ್ವೆ ಇಲಾಖೆ ಅಧಿಕಾರಿ….!

ದಾವಣಗೆರೆ: ಕೃಷಿ ಭೂಮಿಯ ಚೆಕ್‌ ಬಂದಿ ಮತ್ತು ಪೋಡಿಯ ನಂಬರ್‌ ಅದಲು ಬದಲಾಗಿದ್ದನ್ನು ಸರಿ‌ ಮಾಡಿಕೊಡಲು 40 ಸಾವಿರ ಲಂಚಕ್ಕೆ ಬೇಡಿಕೆ‌ ಇಟ್ಟು 5 ಸಾವಿರ ಲಂಚ ಸ್ವೀಕರಿಸುವಾಗ ಸರ್ವೆ ಇಲಾಖೆ ಅಧಿಕಾರಿ ಲೋಕಯುಕ್ತ ಬಲೆಗೆ‌ ಬಿದ್ದಿದ್ದಾರೆ.

ಜಿಲ್ಲಾಧಿಕಾರಿ ಕಾರ್ಯಾಲಯದ ಭೂ ದಾಖಲೆ ಮತ್ತು ಸರ್ವೆ ಇಲಾಖೆಯ ಸರ್ವೆ ಅಧಿಕಾರಿ ಕೇಶವಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ತಮ್ಮ ಕಚೇರಿಯಲ್ಲಿಯೇ 5,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆದಿದೆ.

ಜಗಳೂರು ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಮದ ಪಿ.ಜಿ. ಮುನಿಯಪ್ಪ ಅವರು ಸೊಸೆಯ ತಾಯಿಯ ಹೆಸರಿನಲ್ಲಿರುವ ಜಮೀನಿನ ಚೆಕ್‌ ಬಂದಿ ಮತ್ತು ಪೋಡಿಯ ನಂಬರ್‌ ಅದಲು ಬದಲಾಗಿದ್ದು, ಅದನ್ನು ಸರಿಪಡಿಸಿಕೊಡುವಂತೆ ಅರ್ಜಿ ಸಲ್ಲಿಸಿದ್ದರು.ಚೆಕ್‌ ಬಂದಿ ಮತ್ತು ಪೋಡಿಯ ನಂಬರ್‌ ಸರಿಪಡಿಸಲು 40,000 ಲಂಚ ಕೊಡುವಂತೆ ಬೇಡಿಕೆ ಇಟ್ಟಿದ್ದರು. ಮುನಿಯಪ್ಪ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top