ದಾವಣಗೆರೆ: ಕೃಷಿ ಭೂಮಿಯ ಚೆಕ್ ಬಂದಿ ಮತ್ತು ಪೋಡಿಯ ನಂಬರ್ ಅದಲು ಬದಲಾಗಿದ್ದನ್ನು ಸರಿ ಮಾಡಿಕೊಡಲು 40 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು 5 ಸಾವಿರ ಲಂಚ ಸ್ವೀಕರಿಸುವಾಗ ಸರ್ವೆ ಇಲಾಖೆ ಅಧಿಕಾರಿ ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ.
ಜಿಲ್ಲಾಧಿಕಾರಿ ಕಾರ್ಯಾಲಯದ ಭೂ ದಾಖಲೆ ಮತ್ತು ಸರ್ವೆ ಇಲಾಖೆಯ ಸರ್ವೆ ಅಧಿಕಾರಿ ಕೇಶವಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ತಮ್ಮ ಕಚೇರಿಯಲ್ಲಿಯೇ 5,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆದಿದೆ.
ಜಗಳೂರು ತಾಲ್ಲೂಕಿನ ಪಲ್ಲಾಗಟ್ಟೆ ಗ್ರಾಮದ ಪಿ.ಜಿ. ಮುನಿಯಪ್ಪ ಅವರು ಸೊಸೆಯ ತಾಯಿಯ ಹೆಸರಿನಲ್ಲಿರುವ ಜಮೀನಿನ ಚೆಕ್ ಬಂದಿ ಮತ್ತು ಪೋಡಿಯ ನಂಬರ್ ಅದಲು ಬದಲಾಗಿದ್ದು, ಅದನ್ನು ಸರಿಪಡಿಸಿಕೊಡುವಂತೆ ಅರ್ಜಿ ಸಲ್ಲಿಸಿದ್ದರು.ಚೆಕ್ ಬಂದಿ ಮತ್ತು ಪೋಡಿಯ ನಂಬರ್ ಸರಿಪಡಿಸಲು 40,000 ಲಂಚ ಕೊಡುವಂತೆ ಬೇಡಿಕೆ ಇಟ್ಟಿದ್ದರು. ಮುನಿಯಪ್ಪ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದ್ದರು.



