Connect with us

Dvgsuddi Kannada | online news portal | Kannada news online

ಹೊನ್ನಾಳಿ; 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

n446837970ec5afc8d8405d1b2902d7052410baad0695e9c4b7ac47c80b75839d08edf1faa

ಹೊನ್ನಾಳಿ

ಹೊನ್ನಾಳಿ; 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

ದಾವಣಗೆರೆ: ಚೆಕ್‌ಬೌನ್ಸ್ ಪ್ರಕರಣವೊಂದರಲ್ಲಿ ತಮಿಳುನಾಡು ಮೂಲದ ವ್ಯಕ್ತಿಗೆ ವಾರೆಂಟ್ ಜಾರಿ ಮಾಡಲು 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಜಿಲ್ಲೆಯ ಹೊನ್ನಾಳಿ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ ಭರತ್, ಅವರ ಸಬಂಧಿ ಸುರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಾವೇರಿ ಜಿಲ್ಲೆಯ ಗುಡ್ಡದಮಾದಾಪುರ ಗ್ರಾಮದ ಅವಿನಾಶ್ ಎಂಬ ವ್ಯಕ್ತಿಯಿಂದ ಲಂಚ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತರ ದಾಳಿ ಮಾಡಿದ್ದಾರೆ. 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, 15 ಸಾವಿರವನ್ನು ಸುರೇಶ್ ಅವರ ಮೂಲಕ ಹೊನ್ನಾಳಿ ಬಸ್ ನಿಲ್ದಾಣದಲ್ಲಿ ಪಡೆಯುತ್ತಿರುವ ವೇಳೆ ಬಂಧಿಸಲಾಗಿದೆ. ಲೋಕಾಯುಕ್ತ ಬಲೆಗೆ ಬಿದ್ದ ಹೊನ್ನಾಳಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಭರತ್ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ತಿಳಿಸಿದ್ದಾರೆ.

ಲೋಕಾಯುಕ್ತ ಎಸ್‌ಪಿ ಎಂ.ಎಸ್‌. ಕೌಲಾಪುರೆ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ರಾಷ್ಟ್ರಪತಿ ಎಚ್‌.ಎಸ್‌. ಪಿಐ ಆಂಜನೇಯ ಎನ್.ಎಚ್‌ ಹಾಗೂ ಸಿಬ್ಬಂದಿ ದಾಳಿ ನಡೆದಿದೆ.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹೊನ್ನಾಳಿ

To Top