ದಾವಣಗೆರೆ: ಇಬ್ಬರು ಅಧಿಕಾರಿಗಳ‌ ಕಚೇರಿ, ಆಸ್ತಿಗಳ ಮೇಲೆ ಲೋಕಾಯುಕ್ತ ದಾಳಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆಯ ಇಬ್ಬರು ಅಧಿಕಾರಿಗಳ ಕಚೇರಿ, ಆಸ್ತಿ-ಪಾಸ್ತಿ ಮೇಲೆ ಲೋಕಾಯುಕ್ತ  (lokayukta karnataka) ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಏಕ ಕಾಲಕ್ಕೆ ದಾಳಿ (Lokayukta Raid) ನಡೆಸಿದ್ದಾರೆ.

ಕೆಆರ್ ಐಡಿಎಲ್  ಎಇಇ ಜಗದೀಶ್ ನಾಯ್ಕ್ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಎಸ್.ಡಿ.ಎ. ಬಿ.ಎಸ್ . ನಡುವಿನಮನೆ ಮೇಲೆ ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತೃತ್ವದಲ್ಲಿ ತಂಡ ದಾಳಿ ನಡೆದಿದೆ. ಅಕ್ರಮ ಆಸ್ತಿ-ಪಾಸ್ತಿ ಶೋಧ ನಡೆಸಿದ್ದಾರೆ.

ದಾವಣಗೆರೆ ನಗರದ ಸರಸ್ವತಿ ಬಡಾವಣೆಯಲ್ಲಿರುವ ಆಹಾರ ಇಲಾಖೆಯ ಎಸ್.ಡಿ.ಎ. ಮನೆಯಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಸರಳ ನೇತೃತ್ವದಲ್ಲಿ ಅಧಿಕಾರಿ, ಸಿಬ್ಬಂದಿಗಳ ತಂಡ ದಾಳಿ ನಡೆಸಿದೆ. ಈ ವೇಳೆ ಎಸ್ ಪಿ ಕೌಲಾಪುರೆ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ದಾವಣಗೆರೆಯಲ್ಲಿ ಎಪಿಎಂಸಿ ಬಳಿ ಇರುವ ಆಹಾರ ಇಲಾಖೆಯ ಉಗ್ರಾಣದ ಕಚೇರಿ ಮೇಲೆ ಸಹ ದಾಳಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಭಾಗದ ಕೆ ಆರ್ ಐ ಡಿ ಎಲ್ ಎಇಇ ಜಗದೀಶ್ ನಾಯ್ಕ್ ಕಚೇರಿ ಮತ್ತು ಶಿವಮೊಗ್ಗ ಹಾಗೂ ಶಿವಮೊಗ್ಗ ಜಿಲ್ಲೆಯ ಮೂರು ಕಡೆಗಳಲ್ಲಿ ಜಗದೀಶ್ ನಾಯ್ಕ್ ಗೆ ಸೇರಿದ ಮೂರು‌ ಮನೆಗಳ ಮೇಲೆ ದಾಳಿ ನಡೆದಿದೆ. ವಿಚಾರದಲ್ಲಿ ಮುಂದುವರೆದಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *