ದಾವಣಗೆರೆ: ಮೂವರು ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ; ಅಪಾರ ಪ್ರಮಾಣ ಚಿನ್ನ, ನಗದು, ಆಸ್ತಿ ಪತ್ತೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ :ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಮೂವರು ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ಮಾಡಿದ್ದು, ಆದಾಯಕ್ಕಿಂತ ಹೆಚ್ಚಿನ ಆಸ್ತಿ, ನಗದು, ಚಿನ್ನ ಪತ್ತೆಹಚ್ಚಿದ್ದಾರೆ.

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ 15 ತಂಡಗಳು ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಹುಬ್ಬಳ್ಳಿ, ಬೆಳಗಾವಿ ಜಿಲ್ಲೆಗಳಲ್ಲಿ ಏಕಾಕಾಲಕ್ಕೆ ದಾಳಿ ನಡೆಸಿವೆ. ಈ ವೇಳೆ ಅಪಾರ ಪ್ರಮಾಣದ ನಗದು, ಆಭರಣಗಳು ಹಾಗೂ ಆಸ್ತಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹುಬ್ಬಳ್ಳಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಮೆಕ್ಯಾನಿಕಲ್ ಇಂಜಿನಿಯರ್ ಸಿದ್ದೇಶ್ವರ ಎನ್. ಹೆಬ್ಬಾಳ ಅವರಿಗೆ ಸೇತಿದ ಹುಬ್ಬಳ್ಳಿ ಕಚೇರಿ, ದಾವಣಗೆರೆಯ ಆಂಜನೇಯ ಬಡಾವಣೆಯಲ್ಲಿರುವ ಮನೆ ಇನ್ನಿತರ ಕಡೆಗಳಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ಅವರು ಆದಾಯಕ್ಕಿತ ಹೆಚ್ಚಿನ 2.61 ಕೋಟಿ ರೂ.ಗಳ ಆಸ್ತಿ ಹೊಂದಿರುವುದು ಪತ್ತೆಯಾಗಿದೆ.

1.62 ಕೋಟಿ ರೂ.ಗಳ ಸ್ಥಿರಾಸ್ತಿ, 2 ಕೋಟಿ ರೂ.ಗಳ ಚರಾಸ್ತಿ ಹೊಂದಿದ್ದಾರೆ. 1.60 ಕೋಟಿ ಮೌಲ್ಯದ 2 ಮನೆಗಳು, 5.60 ಲಕ್ಷದ ನಿವೇಶನ, 1.23 ಕೋಟಿ ರೂ.ಗಳ ಆಭರಣಗಳು ಪತ್ತೆಯಾಗಿದ್ದು ಮನೆಯಲ್ಲಿ 40 ಲಕ್ಷ ರೂ. ನಗದು ದೊರೆತಿದೆ. ದಾಳಿಯ ವೇಳೆ ನಿರೀಕ್ಷೆಗಿಂತ ಹೆಚ್ಚಿನ ಆಸ್ತಿ ಪತ್ತೆಯಾಗಿದೆ.

ಬೆಳಗಾವಿಯ ಕೆಆರ್‌ಐಡಿಎಲ್ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ಅವರಿಗೆ ಸೇರಿದ 5 ಕಡೆಗಳಲ್ಲಿ ದಾಳಿ ನಡೆಯಿತು. ಬೆಳಗಾವಿಯ ಮನೆ ಹಾಗೂ ಕಚೇರಿ, ದಾವಣಗೆರೆಯ ಶಿವಕುಮಾರಸ್ವಾಮಿ ಬಡಾವಣೆಯಲ್ಲಿರುವ ಮನೆ, ಹರಪನಹಳ್ಳಿ ತಾಲೂಕು ಕಂಬಟ್ರಹಳ್ಳಿಯಲ್ಲಿರುವ ಮನೆ, ಆನಗೋಡಿನಲ್ಲಿರುವ ವೈನ್ ಶಾಪ್ ಮೇಲೆ ದಾಳಿ ನಡೆಸಲಾಯಿತು. ಈ ವೇಳೆ 2.54 ಕೋಟಿ ರೂ. ಮೌಲ್ಯದ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾಗಿದೆ.

ಅವರಿಗೆ ದಾವಣಗೆರೆ ಮತ್ತು ಬೆಳಗಾವಿಯಲ್ಲಿ 1.38 ಕೋಟಿ ಮೌಲ್ಯದ 3 ಮನೆಗಳಿವೆ. 62.50 ಲಕ್ಷದ ಕೃಷಿ ಭೂಮಿ, 53.90 ಲಕ್ಷದ ಚಿನ್ನಾಭರಣಗಳು, 38 ಸಾವಿರ ರೂ. ಮೌಲ್ಯದ ಬೆಳ್ಳಿ, 1.50 ಲಕ್ಷ ರೂ. ನಗದು, 20.60 ಲಕ್ಷ ಮೌಲ್ಯದ ವಾಹನಗಳು ಪತ್ತೆಯಾಗಿವೆ. ಬಯಲುಸೀಮೆ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಕೃಷ್ಣಾನಾಯ್ಕ ಅವರಿಗೆ ಸಂಬಂಧಿಸಿದ 4 ಕಡೆಗಳಲ್ಲಿ ದಾಳಿ ನಡೆಯಿತು.

ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯಲ್ಲಿರುವ ಮನೆ, ಎಸ್.ಎಸ್. ಬಡಾವಣೆಯಲ್ಲಿರುವ ಮನೆ, ಹೂವಿನಹಡಗಲಿ ತಾಲೂಕು ಅಡವಿ ಮಲ್ಲಮ್ಮ ಕೆರೆ ತಾಂಡಾ ಹಾಗೂ ಚಿತ್ರದುರ್ಗದ ಕಚೇರಿ ಮೇಲೆ ದಾಳಿ ನಡೆಸಲಾಯಿತು. ದಾಳಿ ಸಂದರ್ಭದಲ್ಲಿ ಅವರು 2.57 ಕೋಟಿ ರೂ. ಮೌಲ್ಯದ, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವುದು ಪತ್ತೆಯಾಗಿದೆ.

1.86 ಕೋಟಿ ಮೌಲ್ಯದ ಸ್ಥಿರಾಸ್ತಿ, 83 ಲಕ್ಷ ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಒಟ್ಟು 1.80 ಕೋಟಿ ಮೌಲ್ಯದ 3 ಮನೆಗಳು, 5 ಲಕ್ಷ ಮೌಲ್ಯದ ನಿವೇಶನ, 6.96 ಲಕ್ಷ ರೂ. ನಗದು, 43 ಲಕ್ಷ ರೂ. ಮೌಲ್ಯದ ಆಭರಣ. 33 ಲಕ್ಷ ಮೌಲ್ಯದ ವಾಹನಗಳು ಪತ್ತೆಯಾಗಿವೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *