Connect with us

Dvgsuddi Kannada | online news portal | Kannada news online

ದಾವಣಗೆರೆ: 1.87 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ನ್ಯಾಯಾಲಯ ವಿಶೇಷ ಸರ್ಕಾರಿ ಅಭಿಯೋಜಕಿ

ದಾವಣಗೆರೆ

ದಾವಣಗೆರೆ: 1.87 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ನ್ಯಾಯಾಲಯ ವಿಶೇಷ ಸರ್ಕಾರಿ ಅಭಿಯೋಜಕಿ

ದಾವಣಗೆರೆ : ಪೋಕ್ಸೋ ಪ್ರಕರಣವೊಂದರ ಆರೋಪಿಗೆ ಪ್ರಕರಣದಿಂದ ಪಾರಗಲು ಸಹಕಾರ ನೀಡಿ ಅದಕ್ಕೆ ಪ್ರತಿಯಾಗಿ 1.87 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ವಿಶೇಷ ಸರ್ಕಾರಿ ಅಭಿಯೋಜಕಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ದಾವಣಗೆರೆ ತಾಲೂಕಿನ ಕಿತ್ತೂರು ಗ್ರಾಮದ ಜಿ.ಟಿ ಮದನ ಕುಮಾರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಆರೋಪಿಗೆ ಸಹಾಯ ಮಾಡಲು ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕಿ ರೇಖಾ ಎಸ್ ಕೊಟೇಗೌಡರ 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯೊಡ್ಡಿದ್ದರು. ಅದರಲ್ಲಿ 1.17 ಲಕ್ಷ ರೂ ಹಣ ಪಡೆದು ನಂತರ ಬಾಕಿ ಉಳಿದ 1.87 ಲಕ್ಷ ಹಣವನ್ನು ಚೆಕ್ ಮೂಲಕ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದಾರೆ. ದಾವಣಗೆರೆಯ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದು, ರೇಖಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top