Connect with us

Dvgsuddi Kannada | online news portal | Kannada news online

ದಾವಣಗೆರೆ: ಶಾಸಕ ಮಾಡಾಳು ವಿರೂಪಾಕ್ಷಪ್ಪ ಸ್ವಗ್ರಾಮದ ಮನೆ, ತೋಟದ ಮನೆಯಲ್ಲಿ ಶೋಧ; 16.50 ಲಕ್ಷ ನಗದು, ದಾಖಲೆ ವಶ

IMG 20230304 065334

ದಾವಣಗೆರೆ

ದಾವಣಗೆರೆ: ಶಾಸಕ ಮಾಡಾಳು ವಿರೂಪಾಕ್ಷಪ್ಪ ಸ್ವಗ್ರಾಮದ ಮನೆ, ತೋಟದ ಮನೆಯಲ್ಲಿ ಶೋಧ; 16.50 ಲಕ್ಷ ನಗದು, ದಾಖಲೆ ವಶ

ದಾವಣಗೆರೆ: ಟೆಂಡರ್ ನೀಡಲು ಲಂಚ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಪುತ್ರನ ಪ್ರಕರಣ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಚನ್ನಗಿರಿ ತಾಲೂಕಿನ ಮಾಡಾಳು ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ನಡೆಸಿ 16.47 ಲಕ್ಷ ರೂ. ನಗದು, ಒಡವೆ ಮತ್ತು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ದಾಟವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೋಲಾಪುರೆ ನೇತೃತ್ವದಲ್ಲಿ ಒಬ್ಬರು ಡಿವೈಎಸ್ಪಿ, 5 ಜನ ಇನ್ಸ್‌ಪೆಕ್ಟರ್‌ಗಳು ಸೇರಿ 15ಕ್ಕೂ ಹೆಚ್ಚು ಸಿಬ್ಬಂದಿ ಮಾಡಾಳು ಗ್ರಾಮದಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಮನೆಗೆ ತೆರಳಿ ಪರಿಶೀಲನೆ ನಡೆಸಿದರು.ಗ್ರಾಮದ ತೋಟದ ಮನೆ, ಮಾವಿನಹೊಳೆ ಬಳಿಯ ಕ್ರಷರ್ ಕಚೇರಿಯಲ್ಲೂ ತಪಾಸಣೆ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡರು.

ಪರಿಶೀಲನೆ ವೇಳೆ ಮನೆಯಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಮತ್ತು ಅವರ ಪುತ್ರರು ಇರಲಿಲ್ಲ. ಕುಟುಂಬ ಸದಸ್ಯರು ಮಾತ್ರ ಇದ್ದರು. ಗ್ರಾಮದ ಜನರು ಮತ್ತು ಪಕ್ಷದ ಕಾರ್ಯಕರ್ತರು ಮನೆಯ ಮುಂದೆ ಜಮಾಯಿಸಿದರು ಶಾಸಕರ ಪರ ಘೋಷಣೆ ಕೂಗಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top