Connect with us

Dvgsuddi Kannada | online news portal | Kannada news online

ದಾವಣಗೆರೆ ಲೋಕಸಭಾ ಚುನಾವಣೆ: ವಾರ್ ರೂಮ್, ಭದ್ರತಾ ಕೊಠಡಿ ಪರಿಶೀಲಿಸಿದ ಜಿಲ್ಲಾ ಚುನಾವಣಾಧಿಕಾರಿ; ಡಾ; ವೆಂಕಟೇಶ್

ಪ್ರಮುಖ ಸುದ್ದಿ

ದಾವಣಗೆರೆ ಲೋಕಸಭಾ ಚುನಾವಣೆ: ವಾರ್ ರೂಮ್, ಭದ್ರತಾ ಕೊಠಡಿ ಪರಿಶೀಲಿಸಿದ ಜಿಲ್ಲಾ ಚುನಾವಣಾಧಿಕಾರಿ; ಡಾ; ವೆಂಕಟೇಶ್

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಏಪ್ರಿಲ್ 12 ರಿಂದ ಆರಂಭವಾಗಲಿದ್ದು ವಿಧಾನಸಭಾ ಕ್ಷೇತ್ರದಲ್ಲಿನ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿನ ವಾರ್ ರೂಮ್ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ವೆಂಕಟೇಶ್ ಎಂ.ವಿ ನಡೆಸಿದರು.

ಮಾಯಕೊಂಡ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಯಲ್ಲಿನ ಸ್ಥಾಪಿಸಲಾದ ವಾರ್ ರೂಂ ಪರಿಶೀಲನೆ ನಡೆಸಲಾಯಿತು. ವಾರ್ ರೂಂನಲ್ಲಿ ಸಾರ್ವಜನಿಕರಿಗೆ ಸಹಾಯಕ್ಕಾಗಿ ಸ್ಥಾಪಿಸಲಾಗಿರುವ ಸಂಪರ್ಕ ವಿಧಾನ, ದೂರು ಸ್ವೀಕರಿಸಿ ನಿರ್ವಹಣೆ ಮಾಡುವ ವ್ಯವಸ್ಥೆ, ಮತಯಂತ್ರಗಳನ್ನು ಸಂಗ್ರಹಿಸಲು ವ್ಯವಸ್ಥೆ ಮಾಡಿಕೊಳ್ಳಲಾದ ಭದ್ರತಾ ಕೊಠಡಿ, ಗೈರು ಮತದಾರರ ಪಟ್ಟಿ ಸಿದ್ದಪಡಿಸುವ ಬಗ್ಗೆ ಪರಿಶೀಲನೆ ನಡೆಸಿದರು.

ಹೊನ್ನಾಳಿ ಭೇಟಿ; ಹೊನ್ನಾಳಿ ಸಹಾಯಕ ಚುನಾವಣಾಧಿಕಾರಗಳ ಕಚೇರಿಗೆ ಭೇಟಿ ನೀಡಿ ಅಲ್ಲಿ ಮತಯಂತ್ರಗಳನ್ನು ಸಂಗ್ರಹಿಸಲು ಸ್ಥಾಪಿಸಲಾದ ಸ್ಟ್ರಾಂಗ್ ರೂಂ ಪರಿಶೀಲನೆ ನಡೆಸಿದರು. ಚೆಕ್‍ಪೋಸ್ಟ್ ಪರಿಶೀಲನೆ; ಹೊನ್ನಾಳಿ ತಾ; ಹೊಳೆಹರಳಹಳ್ಳಿ ಹಾಗೂ ಹರಿಹರ ತಾ; ನಂದಿಗುಡಿ ಚೆಕ್‍ಪೋಸ್ಟ್ ಪರಿಶೀಲನೆ ನಡೆಸಿ ಮಾರ್ಗದಲ್ಲಿ ಹೋಗುವ ಎಲ್ಲ ಮಾದರಿಯ ವಾಹನಗಳನ್ನು ಪರಿಶೀಲನೆ ಮಾಡಬೇಕು. ವಾಹನದಲ್ಲಿ ಸರಕು ಸಾಗಣೆ ಮಾಡುತ್ತಿದ್ದಲ್ಲಿ ನಿಯಮಾನುಸಾರ ಇನ್‍ವಾಯ್ಸ್ ಬಿಲ್, ಡೆಲಿವರಿನೋಟ್ ಎಲ್ಲಿಂದ ಎಲ್ಲಿಗೆ, ಯಾವ ಮಾದರಿ ವಸ್ತು ಎಂದು ತಿಳಿದುಕೊಂಡು ದಾಖಲು ಮಾಡಬೇಕೆಂದು ಸೂಚನೆ ನೀಡಿದರು. ಈ ವೇಳೆ ಮಾಯಕೊಂಡ ಸಹಾಯಕ ಚುನಾವಣಾಧಿಕಾರಿ ದುರ್ಗಶ್ರೀ, ಹೊನ್ನಾಳಿ ಸಹಾಯಕ ಚುನಾವಣಾಧಿಕಾರಿ ಅಭಿಷೇಕ್ ಹಾಗೂ ತಹಶೀಲ್ದಾರರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top