ಭಾನುವಳ್ಳಿ; ತೆರವುಗೊಳಿಸಿದ ವೀರ ಮದಕರಿ ನಾಯಕ ಮಹಾದ್ವಾರ ವಾರದೊಳಗೆ ಮತ್ತೆ ನಿರ್ಮಿಸದಿದ್ರೆ ರಾಜ್ಯಾದ್ಯಂತ ಹೋರಾಟ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಭಾನುವಳ್ಳಿ ಗ್ರಾಮದಲ್ಲಿ ತೆರವು ಮಾಡಿರುವ ವೀರ ಮದಕರಿ ನಾಯಕ ಮಹಾದ್ವಾರ, ಮಹರ್ಷಿ ವಾಲ್ಮೀಕಿ ವೃತ್ತದ ಫಲಕ ಹಾಗೂ ಶಿಲಾನ್ಯಾಸದ ಶಿಲಾ ಫಲಕವನ್ನು ಮತ್ತೆ ಅದೇ ಸ್ಥಳದಲ್ಲೇ ನಿರ್ಮಿಸಬೇಕು. ವಾರದೊಳಗೆ ಮತ್ತೆ ನಿರ್ಮಿಸದಿದ್ರೆ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ನಾಯಕ ಸಮುದಾಯದ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಮುಖಂಡರಾದ ಟಿ.ಶ್ರೀನಿವಾಸ ದಾಸಕರಿಯಪ್ಪ, ನಗರಸಭೆ ಮಾಜಿ ಅಧ್ಯಕ್ಷ ಬಿ.ವೀರಣ್ಣ, ಬೆಂಗಳೂರಿನ ಟಿ.ಆರ್.ತುಳಸೀರಾಮ, ವಕೀಲರಾದ ಮಲ್ಲಿಕಾರ್ಜುನಪ್ಪ ಗುಮ್ಮನೂರು, ಆಂಜನೇಯ ಗುರೂಜಿ, ಹದಡಿ ಹಾಲೇಶಪ್ಪ, ಜಿಗಳಿ ರಂಗಣ್ಣ ಸೇರಿ ಮತ್ತಿತರರ ನೇತೃತ್ವದಲ್ಲಿ ಮುತ್ತಿಗೆ ಹಾಕಿದರು. ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ದೌರ್ಜನ್ಯದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರ ಹಾಕಿದರು.

ಹರಿಹರ ತಾಲೂಕು ಭಾನುವಳ್ಳಿ ಗ್ರಾಮದಲ್ಲಿ 25ವರ್ಷ ಹಳೆಯ ಶ್ರೀ ರಾಜ ವೀರ ಮದಕರಿ ನಾಯಕರ ಮಹಾದ್ವಾರ, ಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ಹಾಗೂ 1999ರಲ್ಲಿ ಮಹಾದ್ವಾರ ಉದ್ಘಾಟಿಸಿದ್ದ ಶಿಲಾ ಫಲಕವನ್ನು ಸತ್ಯ ಶೋಧನಾ ಸಮಿತಿ ಹೆಸರಿನಲ್ಲಿ ಎಸಿ, ತಹಸೀಲ್ದಾರ್ ನೇತೃತ್ವದ ವರದಿ ‍‍ಆದರಿಸಿ, ಜಿಲ್ಲಾಧಿಕಾರಿಗಳು ಅವುಗಳ ತೆರವಿಗೆ ಆದೇಶಿಸಿದ್ದು ಅಕ್ಷಮ್ಯ. ಯಾವುದೇ ಅಧಿಕಾರಿ, ಅಧಿಕಾರಸ್ಥರಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ. ರಾಜ್ಯವ್ಯಾಪಿ ಹೋರಾಟ ನಡೆಸುವ ಮೂಲಕ ಆಗಿರುವ ಲೋಪ ಸರಿಪಡಿಸುವಂತೆ ಮಾಡುತ್ತೇವೆ ಎಂದರು.
ಯಾರ ಚಿತಾವಣೆಯಿಂದಾಗಿ ಭಾನುವಳ್ಳಿ ಗ್ರಾಮದಲ್ಲಿ ನಾಯಕ ಸಮುದಾಯದ ಮಹಿಳೆಯರು, ಪುರುಷರ ಮೇಲೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ದೌರ್ಜನ್ಯ ನಡೆಸುತ್ತಿವೆಯೆಂಬುದು ಗೊತ್ತಿದೆ.

ಭಾನುವಳ್ಳಿ ಗ್ರಾಮದಲ್ಲಿ ಮುಂಚಿನಂತೆ ವೀರ ಮದಕರಿ ನಾಯಕ ವೃತ್ತ, ಮಹರ್ಷಿ ವಾಲ್ಮೀಕಿ ವೃತ್ತದ ನಾಮಫಲಕ ಹಾಗೂ 1999ರಲ್ಲಿ ಆಗಿನ ಸಚಿವರು, ಜನ ಪ್ರತಿನಿಧಿಗಳು ಶಿಲಾನ್ಯಾಸ ನೆರವೇರಿಸಿದ್ದ ಶಿಲಾಫಲಕಕ್ಕೆ ಸಿಗಬೇಕಾದ ನ್ಯಾಯ, ಗೌರವ ಸಿಗುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಜಿಲ್ಲಾಡಳಿತ, ಹರಿಹರ ತಾಲೂಕು ಆಡಳಿತ, ಪೊಲೀಸ್ ಇಲಾಖೆ ನಾಯಕ ಸಮುದಾಯದ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಕಾರಣವಾಗಿದ್ದು, ಇದನ್ನು ಇಲ್ಲಿಗೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಸಿದರು.ಮುಂದಿನ ಒಂದು ವಾರದಿಳಗೆ ನಮ್ಮ ಬೇಡಿಕೆಗೆ ಜಿಲ್ಲಾಡಳಿತ, ತಾಲೂಕು ಆಡಳಿತ ಸ್ಪಂದಿಸದಿದ್ದರೆ, ರಾಜ್ಯವ್ಯಾಪಿ ನಾಯಕ ಸಮುದಾಯ ಬೀದಿಗಿಳಿದು ಹೋರಾಟ ನಡೆಸಲಿದೆ. ಲೋಕಸಭೆ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸುವುದಾಗಿ ಸಮಾಜದ ಮುಖಂಡರು ಎಚ್ಚರಿಸಿದರು.

ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ ಧಾವಿಸಿ, ಮನವಿ ಪತ್ರ ಸ್ವೀಕರಿಸಿದರು. ಕಾನೂನು ಪಾಲನೆ ಮಾಡಲಾಗಿದೆ.ಅಧಿಕಾರಿಗಳು ಸಮಸ್ಯೆಯನ್ನು ಇತ್ಯರ್ಥ ಮಾಡುವಾಗ ಸಂವೇದನಾಶೀಲತೆಯಿಂದ ಕೆಲಸ ಮಾಡಿದಾಗ ಮಾತ್ರ ಸಾರ್ವಜನಿಕರ ಸಮಸ್ಯೆಗಳನ್ನು ನಿವಾರಣೆ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಭಾನುವಳ್ಳಿ ಗ್ರಾಪಂ ಸದಸ್ಯ ಧನ್ಯಕುಮಾರ, ಚನ್ನಬಸಪ್ಪ ಬಿಳಿಚೋಡು, ರೈತ ಸಂಘದ ಮಹೇಶ ಬೇವಿನಹಳ್ಳಿ, ಹಿರಿಯ ಪತ್ರಕರ್ತ ಜಿಗಳಿ ಪ್ರಕಾಶ, ದೇವರಾಜ ಮಲ್ಲಾಪುರ, ಶಾಮನೂರು ಪ್ರವೀಣ, ಕರೂರು ಹನುಮಂತಪ್ಪ, ಜಿಗಳಿ ಅನಂದಪ್ಪ, ಗುಮ್ಮನೂರು ಶಂಭಣ್ಣ, ಶ್ಯಾಗಲಿ ಮಂಜುನಾಥ, ಸತೀಶ್, ಗೋಶಾಲೆ ಸುರೇಶ, ದೇವರಬೆಳಕೆರೆ ಮಹೇಶ್ವರಪ್ಪ, ಚಂದ್ರಪ್ಪ, ಫಣಿಯಾಪುರ ಚಂದ್ರು, ಸುನೀಲ್, ಕೆ.ಆರ್.ರಂಗಪ್ಪ, ಕೆ.ಎಂ.ಚನ್ನಬಸಪ್ಪ, ರಂಗನಾಥ ನಾಯಕ, ಎಂ.ನಿಜಲಿಂಗಪ್ಪ ಜಗಳೂರು ಇತರರು ಪ್ರತಿಭಟನೆಯಲ್ಲಿದ್ದರು

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *