ಪುತ್ರನ ಲಂಚ ಪ್ರಕರಣ; ಜಾಮೀನು ಸಿಕ್ಕ ಮಾಡಾಳ್ ಗೆ ಅದ್ಧೂರಿ ಸ್ವಾಗತ; ಸಿಕ್ಕಿರೋ ದುಡ್ಡು ನನ್ನದೆ; ದಾಖಲೆ ಕೊಟ್ಟು ಹಣ ವಾಪಸ್ ಪಡೆಯುತ್ತೇನೆ; ವಿರೂಪಾಕ್ಷಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಲೋಕಾಯುಕ್ತ ದಾಳಿಯಲ್ಲಿ ಪುತ್ರನ ಲಂಚ ಪ್ರಕರಣ‌ ಮತ್ತು ಮನೆಯಲ್ಲಿ ಪತ್ತೆಯಾದ‌‌ ಹಣದ ಪ್ರಕರಣದಲ್ಲಿ ಜಾಮೀನು ಸಿಕ್ಕ‌ನಂತರ ಚನ್ನಗಿರಿಗೆ ಆಗಮಿಸಿದ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ‌ ಪಕ್ಷದ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.

ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಕೊನೆಗೂ ಚನ್ನಗಿರಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡುತ್ತಿದ್ದಂತೆ ಚನ್ನಗಿರಿಗೆ ಮಾಡಾಳು ವಾಪಸ್ ಆಗಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಮಾಡಾಳ್ ಪರ ಘೋಷಣೆ ಕೂಗಿ ಸಂಭ್ರಮಿಸಿದರು.

ಚನ್ನಗಿರಿಯಲ್ಲಿ ಅಭಿಮಾನಿಗಳ ಸ್ವಾಗತ ನಂತರ ಮಾತನಾಡಿದ ಮಾಡಾಳು ವಿರೂಪಾಕ್ಷಪ್ಪ, ಬೇರೆ ಬೇರೆ ಹಣಕಾಸಿನ ವ್ಯವಹಾರಗಳು ನಮಗೆ ಇವೆ. ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ನಾನು ದಾವಣಗೆರೆ ಬಿಟ್ಟು ಎಲ್ಲೂ ಹೋಗಿಲ್ಲ. ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಜನ ಸಂಪರ್ಕದಿಂದ ದೂರ ಇದ್ದೆ. ದೋಷಮುಕ್ತನಾಗಿ ನಾನು ಹೊರಬರುತ್ತೇನೆ ಎಂದರು.

ನನ್ನದು ಅಡಿಕೆ ತೋಟ, ಅಡಿಕೆ ಮಂಡಿಯೂ ಇದೆ. ಈಗ ಸಿಕ್ಕಿರೋ ಕೋಟ್ಯಾಂತರ ರೂಪಾಯಿ ದುಡ್ಡೆಲ್ಲಾ ಅಕೌಂಟೆಟ್‌ ಮನಿಯಾಗಿದೆ. ಸೂಕ್ತ ದಾಖಲೆಗಳನ್ನ ಕೊಟ್ಟು ‌ನನ್ನ ಹಣವನ್ನ ನಾವು ವಾಪಸ್ ಪಡೆಯುತ್ತೇವೆ ಎಂದಿದ್ದಾರೆ.

ಭ್ರಷ್ಟಾಚಾರದಲ್ಲಿ ಬೇಲ್ ಸಿಕ್ಕ‌ ನಂತರ ಯುದ್ಧವೇ ಗೆದ್ದು ಬಂದಂತೆ ಮಾಡಾಳು ಅಭಿಮಾನಿಗಳು ಮೆರವಣಿಗೆ ಮಾಡಿದ್ದಾರೆ. ಕೆಎಸ್ ಡಿಎಲ್ ಟೆಂಡರ್ ಹಗರಣದಲ್ಲಿ ಲೋಕಾಯುಕ್ತ ದಾಳಿ ನಡೆದ‌ನಂತರ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅಜ್ಞಾತ ಸ್ಥಳದಲ್ಲಿದ್ದರು. ಒಂದು ವಾರದಿಂದ ಮನೆಯಿಂದ ದೂರವಿದ್ದ ವಿರೂಪಾಕ್ಷಪ್ಪ ಇಂದು ಜಾಮೀನು ಸಿಗುತ್ತಿದ್ದಂತೆ ವಾಪಸ್ ಆಗಿದ್ದಾರೆ. ಚನ್ನಗಿರಿಯ ಮಾಡಾಳು ಗ್ರಾಮದ ಮನೆಗೆ ಆಗಮಿಸುತ್ತಿದ್ದಂತೆ ಶಾಸಕರನ್ನ ಅಭಿಮಾನಿಗಳು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *