Connect with us

Dvgsuddi Kannada | online news portal | Kannada news online

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ‌ ಮಾಡಿಸಿದ್ದೇ ಸಂಸದ ಸಿದ್ದೇಶ್ವರ; ಶಾಮನೂರು ಶಿವಶಂಕರಪ್ಪ

IMG 20230305 094452

ದಾವಣಗೆರೆ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ‌ ಮಾಡಿಸಿದ್ದೇ ಸಂಸದ ಸಿದ್ದೇಶ್ವರ; ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿಸಿದ್ದೇ ಸಂಸದ ಜಿ.ಎಂ.ಸಿದ್ದೇಶ್ವರ ಎಂದು ಶಾಸಕ, ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕೋಟಿ, ಕೋಟಿ ಹಣ ಲೋಕಾಯುಕ್ತ ದಾಳಿಯಲ್ಲಿ ವಶ ಪಡಿಸಿಕೊಂಡ ಹಿನ್ನೆಲೆ ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಬಿಜೆಪಿ ಅವರು ಡಿಕೆ ಶಿವಕುಮಾರ್ ದಾಳಿ ಮಾಡಿಸಿದ್ದಾರೆ ಎಂದು ಹೇಳ್ತಾರೆ.‌ಆದರೆ, ನಮ್ಮ ಪಕ್ಷದವರು ಹೇಳ್ತಾರೆ ಬಿಜೆಪಿ ಸಂಸದ ಜಿ.ಎಂ.ಸಿದ್ದೇಶ್ವರ ಅವರೇ ಈ ದಾಳಿ ಮಾಡಿಸಿದ್ದಾರೆ ಎಂದರು.

ಮಾಡಾಳು ವಿರೂಪಾಕ್ಷಪ್ಪ ಮತ್ತು ಸಂಸದ ಜಿ.ಎಂ. ಸಿದ್ದೇಶ್ವರ ನಡುವೆ ವೈಮನಸ್ಸು‌ ಇದೆ. ಈ ಹಿನ್ನೆಲೆಯಲ್ಲಿ ಅವರೇ ಹೇಳಿ ಈ ದಾಳಿ ಮಾಡಿಸಿದ್ದಾರೆ ಎಂದು ಎಂದು ತಿಳಿಸಿದರು. ಗುತ್ತಿಗೆ ಕೊಡಿಸುವ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ 40 ಲಕ್ಷ ಹಣದೊಂದಿಗೆ ಬೆಂಗಳೂರಿನ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದರು. ಈ ಪ್ರಕರಣ ನಂತರ ಚನ್ನಗಿರಿ ತಾಲ್ಲೂಕಿನ ಶಾಸಕರ ಮನೆ ಮೇಲೂ ಲೋಕಾಯುಕ್ತ ಪೊಲೀಸರು ರೈಡ್ ‌ಮಾಡಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top