Connect with us

Dvgsuddi Kannada | online news portal | Kannada news online

ದಾವಣಗೆರೆ; ನಿಯಮಾನುಸಾರ ಮನೆ ಕಟ್ಟಿದವರು ಮಹಾನಗರ ಪಾಲಿಕೆಯಲ್ಲಿಟ್ಟಿದ್ದ ಭದ್ರತಾ ಠೇವಣಿ ಹಿಂಪಡೆಯಲು ಅವಕಾಶ

davangere mahanagara palike dvgsuddi

ದಾವಣಗೆರೆ

ದಾವಣಗೆರೆ; ನಿಯಮಾನುಸಾರ ಮನೆ ಕಟ್ಟಿದವರು ಮಹಾನಗರ ಪಾಲಿಕೆಯಲ್ಲಿಟ್ಟಿದ್ದ ಭದ್ರತಾ ಠೇವಣಿ ಹಿಂಪಡೆಯಲು ಅವಕಾಶ

ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿಯಮಾನುಸಾರ ಅನುಮೋದಿತ ಕಟ್ಟಡ ಪರವಾನಿಗೆ ನಕ್ಷೆಯಂತೆ ಕಟ್ಟಡವನ್ನು ನಿರ್ಮಿಸಿಕೊಂಡವರು ಹಾಗೂ ಸಕ್ಷಮ ಪ್ರಾಧಿಕಾರದಿಂದ occupancy certificate ಪಡೆದುಕೊಂಡವರು ಮಾತ್ರ ಭದ್ರತಾ ಠೇವಣಿ ಮೊತ್ತವನ್ನು ಹಿಂಪಡೆಯಲು ಮಾ. 16 ರಿಂದ30 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿದ್ದಲ್ಲಿ ನಿಯಮಾನುಸಾರ ಪರಿಶೀಲಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಲಾಗಿದೆ.

2015-16 ಜುಲೈ ನಿಂದ ಕಟ್ಟಡ ಪರವಾನಿಗೆ ನೀಡುವ ಸಂದರ್ಭದಲ್ಲಿ ಭದ್ರತಾ ಠೇವಣಿ (Security deposit)
ಅನ್ನು ಪಾವತಿಸಿಕೊಳ್ಳುತ್ತಿದ್ದು, ಸದರಿ ಪಾವತಿಯಾಗಿರುವ
ಶುಲ್ಕವನ್ನು ಇತರೆ ಕಾರ್ಯಗಳಿಗೆ ವಿನಿಯೋಗಿಸಿಕೊಳ್ಳುವ ಸಂಬಂಧ ಫೆ. 9 ರಂದು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗಿದೆ. ಹೀಗಾಗಿ ನಿಯಮಾನುಸಾರ ಮನೆ ಕಟ್ಟಿದವರು ಮಹಾನಗರ ಪಾಲಿಕೆಯಲ್ಲಿ ಇಟ್ಟಿದ್ದ ಭದ್ರತಾ ಠೇವಣಿ ಹಿಂಪಡೆಯಲು ಅವಕಾಶ‌ ನೀಡಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top