ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ವತಿಯಿಂದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಜೀವನೋಪಾಯ ಅಭಿಯಾನ(ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗೌರವಧನದ ಆಧಾರದ ಮೇಲೆ ತಾತ್ಕಾಲಿಕ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಡೇ-ನಲ್ಮ್ ಯೋಜನೆಯಡಿ ರಚಿಸಲಾಗಿರುವ ಅರ್ಹ ಸ್ವ-ಸಹಾಯ ಸಂಘಗಳು ಹಾಗೂ ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ ಸಂಖ್ಯೆ 05, ಅರ್ಜಿ ಸಲ್ಲಿಸಲು ದ್ವಿತೀಯ ಪಿ.ಯು.ಸಿ ಉತ್ತೀರ್ಣರಾಗಿರಬೇಕು, ಹೆಚ್ಚಿನ ವಿದ್ಯಾರ್ಹತೆಗೆ ಆದ್ಯತೆ ನೀಡಲಾಗುವುದು. ಮಾಸಿಕ ಗೌರವಧನ ರೂ.8000 ಪ್ರಯಾಣ ಭತ್ಯೆ ರೂ.2000 ವರೆಗೆ ಪಾವತಿಸಲಾಗುವುದು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯ ಡೇ-ನಲ್ಮ್ ಯೋಜನೆಯಡಿ ರಚಿಸಿದ ಪ್ರದೇಶ ಮಟ್ಟದ ಒಕ್ಕೂಟ/ಸ್ವ-ಸಹಾಯ ಸಂಘದಲ್ಲಿ ಕನಿಷ್ಟ 3 ವರ್ಷದಿಂದ ಸದಸ್ಯರಾಗಿರಬೇಕು. ಸ್ವ-ಸಹಾಯ ಸಂಘವು ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯತ್ವವನ್ನು ಹೊಂದಿರಬೇಕು. ಸ್ವ-ಸಹಾಯ ಸಂಘದಲ್ಲಿ ಆಂತರಿಕ ಸಾ¯ ಪಡೆದು ಸಕಾಲದಲ್ಲಿ ಮರುಪಾವತಿಸಿರಬೇಕು, ಸುಸ್ತಿದಾರರಾಗಿರಬಾರದು.
ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಸ್ಥಳೀಯ ನಿವಾಸಿಯಾಗಿರಬೇಕು. ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು. ಸ್ವ-ಇಚ್ಚಾ ಸೇವಾ ಮನೋಭಾವ ಹೊಂದಿರಬೇಕು. ಕಾರ್ಯನಿಮಿತ್ತ ಅಗತ್ಯವಿದ್ದಲ್ಲಿ ಹೊರ ಸಂಚಾರಕ್ಕೆ ಸಿದ್ದರಿರಬೇಕು. ಅಭ್ಯರ್ಥಿಯು ಸ್ವ-ಸಹಾಯ ಸಂಘದಿಂದ ಸಾಲ ಪಡೆದು ಆಸ್ತಿ ಸೃಜಿಸುವಿಕೆ, ಮಕ್ಕಳ ವಿದ್ಯಾಭ್ಯಾಸ ಮತ್ತು ಮುಂತಾದ ಚಟುವಟಿಕೆಗಳನ್ನು ಕೈಗೊಂಡಿರಬೇಕು. ಪಂಚಸೂತ್ರದ ಬಗ್ಗೆ ತಿಳುವಳಿಕೆಯನ್ನು ಹೊಂದಿದ್ದು, ಸ್ವ-ಸಹಾಯ ಸಂಘ ನಿರ್ವಹಿಸಬೇಕಿರುವ ಪುಸ್ತಕಗಳು ಹಾಗೂ ವಹಿಗಳ ಬಗ್ಗೆ ಜ್ಞಾನವನ್ನು ಹೊಂದಿರಬೇಕು. ಯಾವುದೇ ಸರ್ಕಾರಿ, ಅರೆಸರ್ಕಾರಿ, ಎನ್.ಜಿ.ಓ ಗಳಲ್ಲಿ ಉದ್ಯೋಸ್ಥರಾಗಿರಬಾರದು. 18 ರಿಂದ 45 ವರ್ಷದೊಳಗಿನ ವಯೋಮಾನದಾವರಾಗಿಬೇಕು (ಎಸ್.ಎಸ್.ಎಲ್.ಸಿ ಅಂಕಪಟ್ಟಿ ಲಗತ್ತಿಸಬೇಕು).
ಅರ್ಹ ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಆಭ್ಯರ್ಥಿಗಳು ಅರ್ಜಿಯನ್ನು ಜ.25 ರೊಳಗಾಗಿ ದ್ವಿಪ್ರತಿಯಲ್ಲಿ ಆಯುಕ್ತರು ಮಹಾನಗರ ಪಾಲಿಕೆ ದಾವಣಗೆರೆ ಅವರಿಗೆ ಸಲ್ಲಿಸಬೇಕು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



