ದಾವಣಗೆರೆ: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಾಲಿಕೆ ಪ್ರಥಮ ದರ್ಜೆ ಸಹಾಯಕ

ದಾವಣಗೆರೆ: ಖಾತೆ ಬದಲಾವಣೆ ಮಾಡಿಕೊಡಲು ಲಂಚ ಪಡೆಯುವಾಗ ದಾವಣಗೆರೆ ಮಹಾನಗರ ಪಾಲಿಕೆ ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಸೈಟ್ ನ ಖಾತೆ ‌ಬದಲಾವಣೆ ಮಾಡಿಕೊಡಲು 2,500 ರೂಪಾಯಿ ಲಂಚ ಪಡೆಯುತ್ತಿದ್ದ ವಲಯ ಕಚೇರಿ-2ರ ಪ್ರಥಮ ದರ್ಜೆ ಸಹಾಯಕ ಪಾಲನಾಯಕ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಾನೆ.

ದಾವಣಗೆರೆ ಅಡಿಕೆ ಧಾರಣೆ: ಮತ್ತೆ ಏರಿಕೆ ಕಂಡ ದರ; ಮಾ.14ರ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?

ಇಂದು (ಮಾ.14) ಲೋಕಾಯುಕ್ತ ಪೊಲೀಸರು ದೂರಿನ ಆಧಾರದ ಮೇಲೆ ದಾಳಿ ಮಾಡಿ ಬಂಧಿಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆಯ 30ನೇ ವಾರ್ಡ್‌ನ ಬಾಡ ಕ್ರಾಸ್‌ನಲ್ಲಿ (ಮೋತಿ ನಗರ) ಖಾಲಿ ನಿವೇಶನವನ್ನ ತಮ್ಮ ಸಹೋದರಿ ಜಿ.ಯು. ಕಾವ್ಯ ಅವರಿಗೆ ಖಾತೆ ಬದಲಾವಣೆಗೆ ಜಿ.ಯು. ಬಸವನಗೌಡ ಎಂಬುವರು ಮಹಾನಗರ ಪಾಲಿಕೆ ವಲಯ ಕಚೇರಿ-2ರಲ್ಲಿ ಅರ್ಜಿ ಸಲ್ಲಿಸಿದ್ದರು.

ಅಗ್ನಿವೀರ್ ನೇಮಕಾತಿಗೆ ಆನ್‌ಲೈನ್ ಅರ್ಜಿ ಅಹ್ವಾನ

ಖಾತೆ ಬದಲಾವಣೆ ಮಾಡಿಕೊಡಲು ಪ್ರಥಮ ದರ್ಜೆ ಸಹಾಯಕ ಪಾಲನಾಯಕ 2,500 ರೂಪಾಯಿಗೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಬಸವನಗೌಡ ಜಿಲ್ಲಾ ಲೋಕಾಯುಕ್ತ ಪೊಲೀಸರಿಗೆ ದೂರು ಸಲ್ಲಿಸಿದರು. ಪಾಲನಾಯಕ ಕಚೇರಿಯಲ್ಲೇ ಹಣ ಪಡೆಯುತ್ತಿದ್ದಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಜಿಲ್ಲಾ ಲೋಕಾಯುಕ್ತ ಅಧೀಕ್ಷಕ ಎಂ.ಎಸ್. ಕೌಲಾಪುರೆ ಮಾರ್ಗದರ್ಶನ, ಪೊಲೀಸ್ ನಿರೀಕ್ಷಕರಾದ ಪ್ರಭು ಬಿ. ಸೂರಿನ, ಮುಸ್ತಾಕ್ ಅಹಮ್ಮದ್ ಮತ್ತು ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts