Connect with us

Dvgsuddi Kannada | online news portal | Kannada news online

ದಾವಣಗೆರೆ ಮೇಯರ್ ಚುನಾವಣೆ: ಸಚಿವ ಆರ್. ಶಂಕರ್ ಮತದಾನ ಹಕ್ಕು ವಿಚಾರಣೆ ಮುಂದೂಡಿದ ಹೈಕೋರ್ಟ್

ಪ್ರಮುಖ ಸುದ್ದಿ

ದಾವಣಗೆರೆ ಮೇಯರ್ ಚುನಾವಣೆ: ಸಚಿವ ಆರ್. ಶಂಕರ್ ಮತದಾನ ಹಕ್ಕು ವಿಚಾರಣೆ ಮುಂದೂಡಿದ ಹೈಕೋರ್ಟ್

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮತದಾರರ ಪಟ್ಟಿಯಲ್ಲಿ ಸಚಿವ R.ಶಂಕರ್ ಹೆಸರು ಸೇರ್ಪಡೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಹೈಕೋರ್ಟ್​​ ಮೊರೆ ಹೋಗಿದ್ದಾರೆ. ಇಂದು ವಿಚಾರಣೆ ನಡೆಯಬೇಕಿತ್ತು. ಆದರೆ, ಸಚಿವರು ಸಮಯಾವಕಾಶ ಕೇಳಿದ ಹಿನ್ನೆಲೆ ವಿಚಾರಣೆಯನ್ನು ಫೆ. 19ಕ್ಕೆ ಮುಂದೂಡಿಕೆಯಾಗಿದೆ.

ಫೆ. 24ರಂದು ಪಾಲಿಕೆಯ ಮೇಯರ್​ ಚುನಾವಣೆ ನಡೆಯಲಿದ್ದು, ಮತದಾರರ ಪಟ್ಟಿಯಲ್ಲಿ ಸಚಿವರ ಹೆಸರು ದಾವಣಗೆರೆ ಮತ್ತು ರಾಣೆಬೆನ್ನೂರು ಎರಡೂ ಕಡೆ ಸೇರ್ಪಡೆ ಮಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಸದಸ್ಯರು ಹೈಕೋರ್ಟ್​​ ಮೊರೆಹೋಗಿದ್ದಾರೆ. ಇದೀಗ, ಸಚಿವರು ಸಮಯ ಕೇಳಿದ್ದರಿಂದ ವಿಚಾರಣೆ ಮುಂದೂಡಿಕೆಯಾಗಿದೆ.

ಸಚಿವ ಆರ್.ಶಂಕರ್​ ಹೆಸರು ರಾಣೆಬೆನ್ನೂರು ನಗರಸಭೆ ಮತದಾರರ ಪಟ್ಟಿಯಲಿದೆ. ಜೊತೆಗೆ ದಾವಣಗೆರೆ ವಿಳಾಸ ನೀಡಿ ನಗರ ಪಾಲಿಕೆ ಮತದಾರರ ಪಟ್ಟಿಯಲ್ಲೂ ಸೇರ್ಪಡೆ ಮಾಡಲಾಗಿದೆ. ಹೀಗಾಗಿ ಆರ್.ಶಂಕರ್​ ಹೆಸರು ಸೇರ್ಪಡೆ ಪ್ರಶ್ನಿಸಿ ಕಾಂಗ್ರೆಸ್ ತಕರಾರು ಅರ್ಜಿ ಸಲ್ಲಿಸಿತ್ತು

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top