Connect with us

Dvgsuddi Kannada | online news portal | Kannada news online

ದಾವಣಗೆರೆ: ಪಾಲಿಕೆ ಆಯುಕ್ತರಿಗೆ ಕಾಮಗಾರಿ ಗುಣಮಟ್ಟದ ಬಗ್ಗೆ ಇರುವ ಕಾಳಜಿ ಗುತ್ತಿಗೆದಾರರ ಬಗ್ಗೆಯೂ ಇರಲಿ ; ಕೆ.ಎಲ್.ಹರೀಶ್ ಬಸಾಪುರ

IMG 20230123 105001

ದಾವಣಗೆರೆ

ದಾವಣಗೆರೆ: ಪಾಲಿಕೆ ಆಯುಕ್ತರಿಗೆ ಕಾಮಗಾರಿ ಗುಣಮಟ್ಟದ ಬಗ್ಗೆ ಇರುವ ಕಾಳಜಿ ಗುತ್ತಿಗೆದಾರರ ಬಗ್ಗೆಯೂ ಇರಲಿ ; ಕೆ.ಎಲ್.ಹರೀಶ್ ಬಸಾಪುರ

ದಾವಣಗೆರೆ: ಮಹಾನಗರ ಪಾಲಿಕೆಯ ಆಯುಕ್ತೆ ರೇಣುಕಾ ಅವರು ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಸ್ಥಳ ಪರಿಶೀಲನೆ ಮಾಡಿರುವುದು ಹಾಗೂ ಗುಣಮಟ್ಟ ಕಾಯ್ದುಕೊಳ್ಳಲು ಗುತ್ತಿಗೆದಾರರಿಗೆ ಸಲಹೆ ನೀಡಿರುವುದು ಸ್ವಾಗತಾರ್ಹ.ಆಯುಕ್ತರಿಗೆ ಕಾಮಗಾರಿ ಗುಣಮಟ್ಟದ ಬಗ್ಗೆ ಇರುವ ಕಾಳಜಿ, ಗುತ್ತಿಗೆದಾರರ ಬಿಲ್ ಪಾವತಿಯ ಬಗ್ಗೆ ಇರಲಿ ಎಂಬುದೇ ನೊಂದ ಗುತ್ತಿಗೆದಾರರ ಅಭಿಪ್ರಾಯವಾಗಿದೆ.

ಪಾಲಿಕೆಯಲ್ಲಿ ಗುತ್ತಿಗೆದಾರರ ಫೈಲ್ ಗಳು ಆಮೆಗತಿಯಲ್ಲಿ ಟೇಬಲ್ ನಿಂದ ಟೇಬಲ್ ಗೆ ಸಾಗುತ್ತಿದ್ದು, ತಾವು ಗುತ್ತಿಗೆದಾರರ ಹಾಗೂ ಪಾಲಿಕೆ ಅಧಿಕಾರಿಗಳ ಸಭೆ ಕರೆದು ಇಬ್ಬರ ಸಮ್ಮುಖದಲ್ಲಿ ಗುತ್ತಿಗೆದಾರರಿಗೆ ನಿಗದಿತ ಸಮಯದಲ್ಲಿ ಕಮಿಷನ್ ರಹಿತ ಬಿಲ್ ಪಾವತಿಗೆ ವ್ಯವಸ್ಥೆ ಮಾಡಿದರೆ ಗುಣಮಟ್ಟದ ಕಾಮಗಾರಿಯ ಅನುಮಾನವೇ ಇರುವುದಿಲ್ಲ.

ಕೇವಲ ಗುತ್ತಿಗೆದಾರರ ಸಮಸ್ಯೆ ಒಂದೇ ಅಲ್ಲ, ಪಾಲಿಕೆಯ ಎಲ್ಲಾ ವಿಭಾಗಗಳ ಅಧಿಕಾರಿಗಳನ್ನು ಕರೆದು ಪೆಂಡಿಂಗ್ ಫೈಲ್ ಗಳ ಬಗ್ಗೆ ಮಾಹಿತಿ ಪಡೆದು ನಿರ್ದಿಷ್ಟಾವಧಿ ಒಳಗೆ ವಿಲೇವಾರಿ ಮಾಡುವ ಬಗ್ಗೆ ಹಾಗೂ ಫೈಲ್ ವಿಲೇವಾರಿ ಸಮಯ ನಿಗದಿಪಡಿಸುವ ವ್ಯವಸ್ಥೆ ಮಾಡಬೇಕಾಗಿ ಪಾಲಿಕೆ ವ್ಯಾಪ್ತಿಯ ನಾಗರೀಕರ ಪರವಾಗಿ ತಮ್ಮಲ್ಲಿ ಕೇಳಿಕೊಳ್ಳುತ್ತೇನೆ ಎಂದು ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಕೆ.ಎಲ್ ಹರೀಶ್ ಬಸಾಪುರ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top