ದಾವಣಗೆರೆ: ಕಸ ನಿರ್ವಹಣೆಯಲ್ಲಿ ವಿಫಲರಾದ ಸಾರ್ವಜನಿಕರಿಗೆ 1.22 ಲಕ್ಷ ದಂಡ ವಿಧಿಸಿದ ಪಾಲಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕಸ ನಿರ್ವಹಣೆಯಲ್ಲಿ ವಿಫಲರಾದ ಸಾರ್ವಜನಿಕರಿಗೆ ಮಹಾನಗರ ಪಾಲಿಕೆ 1.22 ಲಕ್ಷ ದಂಡ ವಿಧಿಸಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಸ ನಿರ್ವಹಣೆ ವ್ಯವಸ್ಥೆಯನ್ನು ಉತ್ತಮಗೊಳಿಸುವ ಸಲುವಾಗಿ ಡಿ.1 ರಿಂದ 12ರ ವರೆಗೆ ಆರೋಗ್ಯ ನಿರೀಕ್ಷಕರುಗಳು ತಮ್ಮ ವಾರ್ಡ್‍ಗಳಿಗೆ ಭೇಟಿ ನೀಡಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವಿಕೆ, ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್‍ಗಳ ಬಳಕೆ, ತ್ಯಾಜ್ಯ ವಿಂಗಡಣೆ ಮಾಡದೇ ಇರುವುದು ಹಾಗೂ ಬೀದಿ ವ್ಯಾಪಾರಸ್ಥರು ಅಗತ್ಯ ಕಸದಬುಟ್ಟಿಗೆ ತ್ಯಾಜ್ಯ ವಿಂಗಡಿಸಲು ವಿಫಲರಾದ 350 ಉಲ್ಲಂಘನೆದಾರರುಗಳಿಂದ ರೂ.1,22,447 ದಂಡ ವಸೂಲಿ ಮಾಡಲಾಗಿದೆ.

ನಿಯಮ ಉಲ್ಲಂಘಿಸಿದ ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಪಿ.ಒ.ಎಸ್ ಮಶೀನ್ ಗಳ ಮೂಲಕ ದಂಡ ವಿಧಿಸಲಾಯಿತು. ದಂಡ ವಸೂಲಿಗೆ ಅನುಕೂಲವಾಗುವಂತೆ ಯುಪಿಐ, ಡೆಬಿಟ್ ಕಾರ್ಡ್, ನಗದುಗಳ ಮೂಲಕ ಹಣ ಪಾವತಿಸುವ ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಲಾಗಿತ್ತು. ನಗರದ ಎಲ್ಲಾ ಸಾರ್ವಜನಿಕರು, ಉದ್ದಿಮೆದಾರರು ತಮ್ಮಲ್ಲಿ ಉತ್ಪಾದಿಸಿದ ತ್ಯಾಜ್ಯವನ್ನು ಖಾಲಿ ನಿವೇಶನ, ಚರಂಡಿ, ರಸ್ತೆ ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಎಸೆಯದೆ ಮೂಲದಲ್ಲಿಯೇ ಹಸಿ, ಒಣ ಹಾಗೂ ಸ್ಥಾನಿಟರಿ ತ್ಯಾಜ್ಯಗಳಾಗಿ ವಿಂಗಡಿಸಿ ಮಹಾನಗರ ಪಾಲಿಕೆಯ ತ್ಯಾಜ್ಯ ವಿಂಗಡಣಾ ವಾಹನಗಳಿಗೆ ನೀಡುವಂತೆ ಹಾಗೂ ಏಕಬಳಕೆ ಪ್ಲಾಸ್ಟಿಕ್‍ಗಳ ಬಳಕೆಯನ್ನು ನಿರಾಕರಿಸುವ ಮೂಲಕ ನಗರ ಸ್ವಚ್ಛತೆಯಲ್ಲಿ ಮಹಾನಗರ ಪಾಲಿಕೆಯೊಂದಿಗೆ ಕೈಜೋಡಿಸಬೇಕು ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *