Connect with us

Dvgsuddi Kannada | online news portal | Kannada news online

ದಾವಣಗೆರೆ: ಕಟ್ಟಡ ನಿರ್ಮಾಣ, ವಾಹನ ಸ್ವಚ್ಛತೆ, ಕೈತೋಟಕ್ಕೆ ನೀರು ಬಳಕೆಗೆ ನಿರ್ಬಂಧ

davangere mahanagara palike dvgsuddi

ದಾವಣಗೆರೆ

ದಾವಣಗೆರೆ: ಕಟ್ಟಡ ನಿರ್ಮಾಣ, ವಾಹನ ಸ್ವಚ್ಛತೆ, ಕೈತೋಟಕ್ಕೆ ನೀರು ಬಳಕೆಗೆ ನಿರ್ಬಂಧ

ದಾವಣಗೆರೆ: ನೀರಿನ ತೀವ್ರ ಕೊರತೆ, ಭದ್ರಾ ನಾಲೆಯಲ್ಲಿ ನೀರಿನ ಹರಿವು ನಿಂತಿದೆ. ಹೀಗಾಗಿ ಸಾರ್ವಜನಿಕರು ಕಟ್ಟಡ ನಿರ್ಮಾಣ, ವಾಹನ ಸ್ವಚ್ಛತೆ, ಕೈತೋಟ, ಮನೋರಂಜನಾ ಕಾರಂಜಿ ಸೇರಿದಂತೆ ಹಲವು ಕಾರ್ಯಗಳಿಗೆ ನೀರನ್ನು ಬಳಸದಂತೆ ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ನಿರ್ಬಂಧ ವಿಧಿಸಿದ್ದಾರೆ.

ಬಲನಗರದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದ್ದು, ಕುಡಿಯುವ ನೀರಿನ ಅಭಾವ ಉಂಟಾಗಿದೆ. ಕಳೆದ ಮಳೆಗಾಲದಲ್ಲಿ ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದೆ.ಇಲ ಇನ್ನೂ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗುತ್ತಿದ್ದು, ಫೆ.28ರಿಂದ ಭದ್ರಾ ನಾಲೆಯಲ್ಲಿ ನೀರಿನ ಹರಿವು ನಿಲ್ಲಿಸಿರುವುದರಿಂದ ನಗರಕ್ಕೆ ಕೆಲ ದಿನ ಮಾತ್ರ ನೀರು ಸರಬರಾಜು ಮಾಡಲು ಲಭ್ಯವಿದೆ. ಹೀಗಾಗಿ ನಗರದಲ್ಲಿ ನೀರು ಪೋಲು ಮಾಡುವುದನ್ನು ತಡೆಗಟ್ಟಲು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸಬೇಕು. ನಾಗರಿಕರು ನಲ್ಲಿಯ ನೀರನ್ನು ಕುಡಿಯುವುದಕ್ಕೆ ಉಪಯೋಗಿಸಬೇಕು.

ವಾಹನ ಸ್ವಚ್ಛತೆ, ಕೈತೋಟ, ಮನೋರಂಜನಾ ಕಾರಂಜಿ, ಸಿನಿಮಾ ಮಂದಿರ ಹಾಗೂ ವಾಣಿಜ್ಯ ಕಟ್ಟಡಗಳಲ್ಲಿ ಕುಡಿಯಲು ಹಾಗೂ ಇತರೆ ಬಳಕೆಗೆ ರಸ್ತೆ ಸ್ವಚ್ಛತೆಗೆ ಹಾಗೂ ಇತರೆ ಉದ್ದೇಶಕ್ಕೆ ಕುಡಿಯುವ ನೀರನ್ನು ಬಳಸದಂತೆ ದಿನನಿತ್ಯ ಗೃಹ ಬಳಕೆಗೆ ಬೊರ್‌ವೆಲ್ ನೀರನ್ನು ಉಪಯೋಗಿಸುವಂತೆ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top