ದಾವಣಗೆರೆ: ಖಾಲಿ ನಿವೇಶನ ಮಾಲೀಕರಿಗೆ ದಂಡ ವಿಧಿಸುವ ಎಚ್ಚರಿಕೆ ನೀಡಿದ ಮಹಾನಗರ ಪಾಲಿಕೆ…!!!

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನಗಳಲ್ಲಿ ಹಾಗೂ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಅಭಿವೃದ್ಧಿಯಾಗುತ್ತಿದ್ದು, ಡೆಂಗ್ಯೂ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರುತ್ತದೆ. ನಿವೇಶನ ಮಾಲೀಕರು ತಮ್ಮ ಜವಾಬ್ದಾರಿ ಅರಿತು, ನೀರು ನಿಲ್ಲದಂತೆ ಮತ್ತು ಸೊಳ್ಳೆಗಳು ಅಭಿವೃದ್ಧಿಯಾಗದಂತೆ ನಿವೇಶನಗಳನ್ನು ಸ್ವಚ್ಛಗೊಳಿಸಿಕೊಳ್ಳಲು ಸೂಚಿಸಲಾಗಿದೆ.

ಒಂದು ವೇಳೆ ಖಾಲಿ ನಿವೇಶನ, ಕಟ್ಟಡ ನಿರ್ಮಾಣ ಹಂತದಲ್ಲಿನ ನಿವೇಶನಗಳಲ್ಲಿ ನೀರು ನಿಂತು ಸೊಳ್ಳೆ ಲಾರ್ವಾಗಳು ಕಂಡುಬಂದಲ್ಲಿ ಮಹಾನಗರ ಪಾಲಿಕೆಯಿಂದ ದಂಡ ವಿಧಿಸುವುದರೊಂದಿಗೆ ನಿವೇಶನ ಸ್ವಚ್ಛಗೊಳಿಸಿ ಇದಕ್ಕೆ ತಗುಲುವ ವೆಚ್ಚವನ್ನು ಆಸ್ತಿತೆರಿಗೆ ಬಾಕಿ ರೂಪದಲ್ಲಿ ವಸೂಲು ಮಾಡಲು ಕ್ರಮ ವಹಿಸಲಾಗುವುದೆಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Related Post
Recent Posts