Connect with us

Dvgsuddi Kannada | online news portal | Kannada news online

ದಾವಣಗೆರೆ‌‌‌ ಮಹಾನಗರ ಪಾಲಿಕೆಯಲ್ಲಿ ಲಂಚ ಕೊಟ್ರೇ ಒಂದೇ ದಿನದಲ್ಲಿ ಇ-ಸ್ವತ್ತು; ಆಡಳಿತ ಕಾಂಗ್ರೆಸ್ ಪಕ್ಷ ಸದಸ್ಯರೇ ಕಿಡಿ

davangere mahanagara palike dvgsuddi

ದಾವಣಗೆರೆ

ದಾವಣಗೆರೆ‌‌‌ ಮಹಾನಗರ ಪಾಲಿಕೆಯಲ್ಲಿ ಲಂಚ ಕೊಟ್ರೇ ಒಂದೇ ದಿನದಲ್ಲಿ ಇ-ಸ್ವತ್ತು; ಆಡಳಿತ ಕಾಂಗ್ರೆಸ್ ಪಕ್ಷ ಸದಸ್ಯರೇ ಕಿಡಿ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಲಂಚ ಮಿತಿಮೀರಿದೆ. ಪಾಲಿಕೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ವಿದ್ದು, ಸಾಮಾನ್ಯ ಜನಕ್ಕೆ ತಿಂಗಳಾದರೂ ಇ-ಸ್ವತ್ತು ಸಿಗಲ್ಲ. ಆದರೆ,‌ ಮಧ್ಯವರ್ತಿಗಳ ಮೂಲಕ ಲಂಚ ಕೊಟ್ರೇ ಒಂದೇ ದಿನದಲ್ಲಿ ಇ-ಸ್ವತ್ತು ಸಿಗುತ್ತದೆ ಎಂದು ಆಡಳಿತ ಕಾಂಗ್ರೆಸ್ ಪಕ್ಷ ಸದಸ್ಯರು ಕಿಡಿಕಾರಿದರು.

ಒಂದೇ ದಿನದಲ್ಲಿ ಇ-ಸ್ವತ್ತು: ಪಾಲಿಕೆ ಸಮಾನ್ಯ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಸದಸ್ಯ ಸುರಭಿ ಶಿವಮೂರ್ತಿ, ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರದ ನಡೆಯುತ್ತಿದೆ. ಇ-ಸ್ವತ್ತು ಕೊಡಲು ಸಾವಿರಾರು ರೂಪಾಯಿ ಲಂಚ ಕೇಳಲಾಗುತ್ತಿದೆ. ಸಾಮಾನ್ಯ ಜನಕ್ಕೆ ತಿಂಗಳಾದರೂ ಇ-ಸ್ವತ್ತು ಸಿಗುತ್ತಿಲ್ಲ. ಆದರೆ, ಕೆಲ ಮಧ್ಯವರ್ತಿಗಳು ಲಂಚ ಪಡೆದು ಒಂದೇ ದಿನದಲ್ಲಿ ಇ-ಸ್ವತ್ತು ಕೊಡಿಸುತ್ತಾರೆ ಆರೋಪಿಸಿದರು.

ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ:  ಈ ಆರೋಪಕ್ಕೆ ಸಭೆಯಲ್ಲಿದ್ದ ಇನ್ನೊಬ್ಬ ಕಾಂಗ್ರೆಸ್ ಸದಸ್ಯ ಉದಯ ಕುಮಾರ್ ಧ್ವನಿಗೂಡಿಸಿದರು. ಮಧ್ಯವರ್ತಿಗಳ ಹಾವಳಿಯ ದಾಖಲೆ ಪ್ರದರ್ಶನ ಮಾಡಿದರು. ಕೂಡಲೇ ಇಂತಹ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಿ, ಪಾಲಿಕೆಯಲನ್ನು ಮಧ್ಯವರ್ತಿ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top