ದಾವಣಗೆರೆ: ಖಾಲಿ ನಿವೇಶನ ಮಾಲೀಕರು ಕಾಂಪೌಂಡ್, ತಡೆಗೋಡೆ ನಿರ್ಮಾಣ ಮಾಡಿಕೊಳ್ಳಲು ಪಾಲಿಕೆ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಖಾಲಿ ನಿವೇಶನ ಮಾಲೀಕರು ಸಾರ್ವಜನಿಕರಿಗೆ ಕಸ ಹಾಕಲು ಅವಕಾಶ ಮಾಡಿದ್ದು, ಅನುಪಯುಕ್ತ ಗಿಡ ಗಂಟೆಗಳು ಬೆಳೆದು ನೆರೆ ಹೊರೆಯವರ ಆರೋಗ್ಯಕ್ಕೆ ಸಮಸ್ಯೆಯಾಗುತ್ತಿರುವ ಕಾರಣ ಖಾಲಿ ನಿವೇಶನಗಳ ಮಾಲೀಕರು ಕಾಂಪೌಂಡ್, ತಡೆಗೋಡೆ ನಿರ್ಮಾಣ ಮಾಡಿಕೊಳ್ಳಲು ದಾವಣಗೆರೆ ಮಹಾನಗರ ಪಾಲಿಕೆ ಸೂಚನೆ ನೀಡಿದೆ.

ಖಾಲಿ ನಿವೇಶನ ಈ ಕೂಡಲೇ ಸ್ವಚ್ಛಗೊಳಿಸಿ ಯಾವುದೇ ಅನಧಿಕೃತ ವ್ಯಕ್ತಿಗಳು ಹಾಗು ಬಿಡಾಡಿ ಪ್ರಾಣಿಗಳ ಪ್ರವೇಶಕ್ಕೆ ಅವಕಾಶವಿಲ್ಲದಂತೆ 30 ದಿನಗಳೊಳಗೆ 6 ಅಡಿ ಎತ್ತರದ ಕಾಂಪೌಂಡ್, ತಡೆಗೋಡೆ ನಿರ್ಮಿಸಿಕೊಳ್ಳಬೇಕು. ಒಂದು ವೇಳೆ ಮಾಲೀಕರು ಉಲ್ಲಂಘನೆ ಮುಂದುವರೆಸಿದಲ್ಲಿ ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮದನ್ವಯ ಕ್ರಮಕೈಗೊಳ್ಳಲಾಗುವುದು. ನಗರವನ್ನು ಸ್ವಚ್ಛ ಹಾಗೂ ಸುಂದರ ನಗರವನ್ನಾಗಿಸಲು ಮಹಾನಗರ ಪಾಲಿಕೆಯೊಂದಿಗೆ ಕೈಜೋಡಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *