ದಾವಣಗೆರೆ: ರಸ್ತೆ ಬದಿ, ಖಾಲಿ ನಿವೇಶನ ಸೇರಿ ಎಲ್ಲೆಂದರಲ್ಲಿ ಕಸ ಹಾಕಿದ್ರೆ 500 ರೂ. ದಂಡ ಎಚ್ಚರಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ನಿಗದಿಪಡಿಸಿದ ಸ್ಥಳ ಬಿಟ್ಟು ರಸ್ತೆ ಬದಿ, ಖಾಲಿ ನಿವೇಶನ ಸಹಿತ ಎಲ್ಲೆಂದರಲ್ಲಿ ಕಸ ಹಾಕಿದ್ರೆ 500 ರೂ. ದಂಡ ವಿಧಿಸುವ ಎಚ್ಚರಿಕೆಯನ್ನು ದಾವಣಗೆರೆ ಮಹಾನಗರ ಪಾಲಿಕೆ ನೀಡಿದೆ‌.

ಎಲ್ಲೆಂದರಲ್ಲಿ ಕಸ ಎಸೆಯುತ್ತಿರುವ ಪ್ರಕರಣಗಳು ಹೆಚ್ಚು

ಪ್ರಸಕ್ತ ಸಾಲಿನಲ್ಲಿ ನಗರವು ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆಯಲು ಪಾಲಿಕೆ ಮತ್ತು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿರುತ್ತಾರೆ. ಆದಾಗ್ಯೂ, ನಗರದ ಇನ್ನು ಹಲವು ಭಾಗದಲ್ಲಿ ಹಸಿಕಸ- ಒಣಕಸ-ಸ್ಯಾನಿಟರಿ ಕಸಗಳನ್ನು ವಿಂಗಡಣೆ ಮಾಡದೇ ಇರುವುದು, ಕಸ ಸಂಗ್ರಹಣಾ ವಾಹನಗಳಿಗೆ ಕಸ ನೀಡದೇ ರಾತ್ರಿ ಮತ್ತು ಮುಂಜಾನೆ ರಸ್ತೆ ಬದಿ, ಖಾಲಿ ನಿವೇಶನಗಳಲ್ಲಿ ಕಸ ಎಸೆಯುತ್ತಿರುವ ಪ್ರಕರಣಗಳು ಕಂಡು ಬಂದಿರುತ್ತವೆ.

ಕಸ ಹಾಕಿದ್ರೆ 500 ರೂ.ಗಳ ವರೆಗೆ ದಂಡ ಎಚ್ಚರಿಕೆ..!!

ಸ್ವಚ್ಛ ಭಾರತ ಮಿಷನ್-2.0 ರಡಿ ಸ್ವ-ಸಹಾಯ ಗುಂಪುಗಳ ಸದಸ್ಯರುಗಳನ್ನು, ಸಮುದಾಯ ಸಂಚಾಲಕರು ಎಂದು ಪ್ರತಿ ತ್ಯಾಜ್ಯ ಸಂಗ್ರಹಣಾ ವಾಹನಗಳೊಂದಿಗೆ ನೇಮಕ ಮಾಡಲಾಗಿದೆ. ತ್ಯಾಜ್ಯ ವಿಂಗಡಣೆ ಮಾಡದೇ ಇರುವ ಹಾಗೂ ಕಸ ಸಂಗ್ರಹಣಾ ವಾಹನಗಳಿಗೆ ಕಸ ನೀಡದೇ ಇರುವಂತಹ ಮನೆ, ಉದ್ದಿಮೆದಾರರುಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಪ್ರಾರಂಭಿಕವಾಗಿ ನಗರದ ಸ್ವಚ್ಚತೆಗೆ ಧಕ್ಕೆಯುಂಟಾಗುವಂತೆ ತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸುತ್ತಿರುವವರಿಗೆ ತಿಳುವಳಿಕೆ ನೀಡಿ, ನಂತರವೂ ಉಲ್ಲಂಘನೆ ಮುಂದುವರೆಸಿದಲ್ಲಿ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆಗಳ ತ್ಯಾಜ್ಯ ನಿರ್ವಹಣೆ ಉಪ ವಿಧಿಗಳಲ್ಲಿರಡಿ ಪ್ರತಿ ಉಲ್ಲಂಘನೆಗೆ ರೂ. 100.00 ರಿಂದ ರೂ. 500.00 ಗಳ ವರೆಗಿನ ದಂಡ ವಿಧಿಸಲಾಗುವುದು.

ಆಸ್ತಿ ತೆರಿಗೆ ರೂಪದಲ್ಲಿ ದಂಡ ಬಾಕಿ ವಸೂಲಿ

ದಂಡ ಪಾವತಿಸದೇ ಇದ್ದಲ್ಲಿ ದಂಡದ ಮೊತ್ತವನ್ನು ಆಸ್ತಿ ತೆರಿಗೆ ಬಾಕಿ ರೂಪದಲ್ಲಿ ವಸೂಲಿಸಲಾಗುವುದು. ಪ್ರಯುಕ್ತ, ಮನೆಗಳನ್ನು ಬಾಡಿಗೆ ನೀಡಿರುವಂತಹ ಮನೆ ಮಾಲೀಕರು ಬಾಡಿಗೆದಾರರುಗಳಿಗೆ ತ್ಯಾಜ್ಯ ವಿಂಗಡಣೆ ಮತ್ತು ನಿರ್ವಹಣೆ ಬಗ್ಗೆ ಅಗತ್ಯ ಷರತ್ತು ವಿಧಿಸಿ ಸಮರ್ಪಕ ತ್ಯಾಜ್ಯ ನಿರ್ವಹಣೆಗೆ ಪಾಲಿಕೆಯೊಂದಿಗೆ ಕೈಜೋಡಿಸಿಸುವುದು. ತಪ್ಪಿದಲ್ಲಿ ಬಾಡಿಗೆದಾರರುಗಳಿಂದ ತ್ಯಾಜ್ಯ ನಿರ್ವಹಣೆ ನಿಯಮಗಳ ಉಲ್ಲಂಘನೆಗೆ ಮನೆ ಮಾಲೀಕರಿಂದ ಆಸ್ತಿ ತೆರಿಗೆ ಬಾಕಿ ರೂಪದಲ್ಲಿ ದಂಡ ವಿಧಿಸಲಾಗುವುದು.

ಪ್ಲಾಸ್ಟಿಕ್ ಬಳಕೆ ನಿಷೇಧ

ಸಾರ್ವಜನಿಕರು ಉತ್ಪತ್ತಿಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಂಗಡಿಸಿ ನಗರದ ಸ್ವಚ್ಛತೆಗೆ ಹಾಗೂ ಭವಿಷ್ಯದ ಪೀಳಿಗೆಯ ಆರೋಗ್ಯಕರ ಪರಿಸರಕ್ಕೆ ಸಹಕರಿಸುವುದು ಹಾಗೂ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಕಪ್‍ಗಳಂತಹ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಲ್ಲಿಸಿ, ತ್ಯಾಜ್ಯ ಉತ್ಪಾದನೆಯನ್ನು ತಗ್ಗಿಸುವಂತೆ ಹಾಗೂ ಬೀದಿಬದಿ ಕಾಫೀ, ಟೀ ಮಾರಾಟಗಾರರು ಕಡ್ಡಾಯವಾಗಿ ಪ್ಲಾಸ್ಟಿಕ್, ಪೇಪರ್ ಕಪ್‍ಗಳನ್ನು ಬಳಸಬಾರದು ಎಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *