ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಆರೋಗ್ಯ ಶಾಖೆಯು ನಗರದಾದ್ಯಂತ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ತೀವ್ರ ಕ್ರಮ ಕೈಗೊಂಡಿದೆ. ಮೇ 2026 ರ ಅವಧಿಯಲ್ಲಿ ವಿವಿಧ ನಿಯಮಗಳನ್ನು ಉಲ್ಲಂಘಿಸಿದ ಸಾರ್ವಜನಿಕರು ಮತ್ತು ವ್ಯಾಪಾರಿಗಳಿಂದ ಒಟ್ಟು 223 ಪ್ರಕರಣಗಳನ್ನು ದಾಖಲಿಸಿ, ₹92,900 ಗಳಷ್ಟು ಸ್ಥಳದಲ್ಲೇ ದಂಡ ವಸೂಲಿ ಮಾಡಲಾಗಿದೆ.
ದಾವಣಗೆರೆ: ನಗರದ ಈ ಪ್ರದೇಶದಲ್ಲಿ ನಾಳೆ ಸಂಜೆವರೆಗೆ ವಿದ್ಯುತ್ ವ್ಯತ್ಯಯ
ಕಸವನ್ನು ಎಲ್ಲೆಂದರಲ್ಲಿ ಎಸೆಯುವುದು, ತ್ಯಾಜ್ಯ ವಿಂಗಡಣೆ ಮಾಡದಿರುವುದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ಮಲಮೂತ್ರ ವಿಸರ್ಜನೆ ಮಾಡುವುದು ಹಾಗೂ ಕಟ್ಟಡ ತ್ಯಾಜ್ಯವನ್ನು ಅನಧಿಕೃತವಾಗಿ ಸುರಿಯುವುದು ಸೇರಿದಂತೆ ಒಟ್ಟು 134 ಪ್ರಕರಣಗಳು ದಾಖಲಾಗಿದ್ದು, ರೂ. 48,400 ದಂಡ ಸಂಗ್ರಹಿಸಲಾಗಿದೆ.
ದಾವಣಗೆರೆ: ಅಂತರ್ಜಲ ಮಟ್ಟ ಹೆಚ್ಚಿಸಲು ಪ್ರತಿಯೊಬ್ಬರೂ ಮಳೆ ನೀರು ಕೊಯ್ಲು ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ
ಸರ್ಕಾರದಿಂದ ನಿಷೇಧಿಸಲ್ಪಟ್ಟಿರುವ ಪ್ಲಾಸ್ಟಿಕ್ ವಸ್ತುಗಳ ಸಂಗ್ರಹಣೆ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು 72 ಪ್ರಕರಣಗಳು ಪತ್ತೆಯಾಗಿದ್ದು, ನಿಯಮ ಉಲ್ಲಂಘಿಸಿದವರಿಂದ ರೂ.39,000 ದಂಡ ವಸೂಲಿ ಮಾಡಲಾಗಿದೆ. ಕೋತ್ಪಾ (COTPA – 2003) ಕಾಯ್ದೆಯ ಸೆಕ್ಷನ್ 4 ರ ಉಲ್ಲಂಘನೆ ಹಾಗೂ ತಂಬಾಕು ಮಾರಾಟ ಪರವಾನಗಿ (TVL) ಇಲ್ಲದೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದವರ ವಿರುದ್ಧ ಒಟ್ಟು 17 ಪ್ರಕರಣಗಳನ್ನು ದಾಖಲಿಸಿ, ರೂ. 5,500 ದಂಡ ವಿಧಿಸಲಾಗಿದೆ. ಅತಿ ಹೆಚ್ಚು ದಂಡ ವಸೂಲಿಯನ್ನು ಆರೋಗ್ಯ ನಿರೀಕ್ಷಾ ರಾಘವೇಂದ್ರ ರವರು 25 ಪ್ರಕರಣಗಳಿಂದ ರೂ. 21.000 ಗಳನ್ನು ವಸೂಲಿ ಮಾಡಿದ್ದಾರೆ.
ನಗರವನ್ನು ಸ್ವಚ್ಛವಾಗಿ ಹಾಗೂ ಸುಂದರವಾಗಿಡಲು ಸಾರ್ವಜನಿಕರು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸಬೇಕು ಮತ್ತು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮಹಾನಗರಪಾಲಿಕೆ ಆಯುಕ್ತ ಡಾ. ಮಹಾಂತೇಶ್ ಅವರು ತಿಳಿಸಿದ್ದಾರೆ.


