Connect with us

Dvgsuddi Kannada | online news portal | Kannada news online

ದಾವಣಗೆರೆ ಮಹಾನಗರ ಪಾಲಿಕೆ ಉಪ ಚುನಾವಣೆ ಫಲಿತಾಂಶ; ತಲಾ ಒಂದೊಂದರಲ್ಲಿ ಬಿಜೆಪಿ, ಕಾಂಗ್ರೆಸ್ ಗೆಲುವು..!

ಪ್ರಮುಖ ಸುದ್ದಿ

ದಾವಣಗೆರೆ ಮಹಾನಗರ ಪಾಲಿಕೆ ಉಪ ಚುನಾವಣೆ ಫಲಿತಾಂಶ; ತಲಾ ಒಂದೊಂದರಲ್ಲಿ ಬಿಜೆಪಿ, ಕಾಂಗ್ರೆಸ್ ಗೆಲುವು..!

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ 2 ವಾರ್ಡ್ ಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಘೋಷಣೆಯಾಗಿದ್ದು,  ಕಾಂಗ್ರೆಸ್, ಬಿಜೆಪಿ ತಲಾ ಒಂದೊಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿವೆ.

wining candent

ಇಂದು ಬೆಳಗ್ಗೆಯಿಂದ ಮತ ಎಣಿಕೆ ಕಾರ್ಯ ನಗರದ ಡಿಆರ್ ಆರ್ ಕಾಲೇಜ್ ನಲ್ಲಿ  ನಡೆದಿದ್ದು, ಎರಡೂ ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದೆ.  ಪಾಲಿಕೆ  ವಾರ್ಡ್ 22 (ಯಲ್ಲಮ್ಮನಗರ) ರಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ವಾರ್ಡ್ 20 (ಭಾರತ್ ಕಾಲೋನಿ) ಕಾಂಗ್ರೆಸ್ ಜಯಗಳಿಸಿದೆ. 20ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮೀನಾಕ್ಷಿ ಜಗದೀಶ್ ಗೆಲುವು.

davangere palike

20ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮೀನಾಕ್ಷಿ ಜಗದೀಶ್, ಪ್ರತಿ ಸ್ಪರ್ಧಿ  ಬಿಜೆಪಿಯ ರೇಣುಕಾ ಕೃಷ್ಣ ಅವರ ವಿರುದ್ಧ 346 ಮತಗಳ ಅಂತರದ‌ ಗೆಲುವು ಸಾಧಿಸಿದ್ಧಾರೆ. 22ನೇ ವಾರ್ಡ್‌ನಲ್ಲಿ ಬಿಜೆಪಿ‌ ಅಭ್ಯರ್ಥಿ ಶಿವಾನಂದ, ಪ್ರತಿಸ್ಪರ್ಧಿ ಕಾಂಗ್ರೆಸ್ ನ ರವಿಸ್ವಾಮಿ ವಿರುದ್ಧ 410 ಮತಗಳ ಅಂತರದಿಂದ ಭರ್ಜರಿ  ಗೆಲುವು ಸಾಧಿಸಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ.

ಕಾಂಗ್ರೆಸ್ ಸದಸ್ಯರಾಗಿದ್ದ ಯಶೋಧಮ್ಮ ( ವಾರ್ಡ್ 20)  ಮತ್ತು ಶಿವಕುಮಾರ್ ದೇವರಮನಿ ( ವಾರ್ಡ್ 22) ರಾಜೀನಾಮೆಯಿಂದ ಚುನಾವಣೆ ಎದುರಾಗಿತ್ತು. ಮಹಾನಗರ ಪಾಲಿಕೆಯ ಒಟ್ಟು 45 ವಾರ್ಡ್ ಗಳಲ್ಲಿ ಉಪ ಚುನಾವಣೆ ಫಲಿತಾಂಶ ಬಳಿಕೆ ಬಿಜೆಪಿ 22 (ನಾಲ್ಕು ಪಕ್ಷೇತರರು ಸೇರಿ) ಕಾಂಗ್ರೆಸ್ 22 (ಒಬ್ಬ ಪಕ್ಷೇತರ ಸೇರಿ), ಜೆಡಿಎಸ್ 1 ಸ್ಥಾನ ಪಡೆದಂತಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top